Select Your Language

Notifications

webdunia
webdunia
webdunia
webdunia

ಮತ್ತೊಂದು ಪ್ರಕರಣದಲ್ಲಿ ಸಿಲುಕಿಕೊಂಡ ನಟ ಸೈಫ್ ಅಲಿ ಖಾನ್‌

ಮತ್ತೊಂದು ಪ್ರಕರಣದಲ್ಲಿ ಸಿಲುಕಿಕೊಂಡ ನಟ ಸೈಫ್ ಅಲಿ ಖಾನ್‌
ಮುಂಬೈ , ಸೋಮವಾರ, 11 ಜೂನ್ 2018 (13:03 IST)
ಮುಂಬೈ : ಕೃಷ್ಣ ಮೃಗ ಬೇಟೆಯಾಡಿದ ಪ್ರಕರಣದಲ್ಲಿ ಇತ್ತೀಚೆಗಷ್ಟೇ ನ್ಯಾಯಾಲಯದಿಂದ ರಿಲೀಫ್ ಪಡೆದಿರುವ ಬಾಲಿವುಡ್ ನಟ ಸೈಫ್ ಅಲಿ ಖಾನ್‌ ಅವರಿಗೆ ಇದೀಗ ಮತ್ತೊಂದು ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ.


ಹೌದು. ನಟ ಸೈಫ್ ಅಲಿ ಖಾನ್ ಅವರಿಗೆ ಬಲ್ಗೇರಿಯಾದಲ್ಲಿ ಕಾಡು ಹಂದಿ ಬೇಟೆಯಾಡಿದ ಪ್ರಕರಣದಲ್ಲಿ ಇದೀಗ ಸಂಕಷ್ಟ ಎದುರಾಗಿದೆ. ಬಲ್ಗೇರಿಯಾದಲ್ಲಿ ಹಂದಿ ಬೇಟೆಗೆ ಸರ್ಕಾರವೇ ಅನುಮತಿ ಕೊಡುತ್ತದೆ. ಆದರೆ ಸೈಫ್ ಅಲಿ ಖಾನ್ ಅವರಿಗೆ ಸಹಾಯ ಮಾಡಿದ ಏಜೆಂಟ್, ಅಧಿಕೃತ ಪರವಾನಗಿ ಪಡೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಬಲ್ಗೇರಿಯಾ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.


ಈ ಕಾನೂನು ಬಾಹಿರವಾಗಿ ಕಾಡು ಹಂದಿ ಬೇಟೆಯಾಡಿದ ಪ್ರಕರಣದಲ್ಲಿ ಇಂಟರ್‌ಪೋಲ್ ಸೂಚನೆ ಅನ್ವಯ, ಮುಂಬೈ ಪೊಲೀಸರು ನಟ ಸೈಫ್ ಅಲಿ ಖಾನ್ ಅವರ ಹೇಳಿಕೆಯನ್ನು ಸಾಕ್ಷಿ ರೂಪದಲ್ಲಿ ದಾಖಲಿಸಿಕೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.


 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನಟಿ ಪ್ರಿಯಾಂಕ ಭಾರತೀಯರಲ್ಲಿ ಕ್ಷಮೆ ಕೇಳಿದ್ಯಾಕೆ ?