Select Your Language

Notifications

webdunia
webdunia
webdunia
webdunia

ಮಾನವೀಯತೆ ಮೆರೆದ ಟಾಲಿವುಡ್ ನ ಪ್ರಿನ್ಸ್ ಮಹೇಶ್ ಬಾಬು

ಮಾನವೀಯತೆ ಮೆರೆದ ಟಾಲಿವುಡ್ ನ ಪ್ರಿನ್ಸ್ ಮಹೇಶ್ ಬಾಬು
ಬೆಂಗಳೂರು , ಗುರುವಾರ, 1 ಫೆಬ್ರವರಿ 2018 (05:45 IST)
ಬೆಂಗಳೂರು : ಸಿನಿಮಾ ತಾರೆಯರು ಸಮಾಜದ ಜನತೆಗೆ ತಮ್ಮ ಕೈಲಾದಷ್ಟು ಸಹಾಯ ಹಸ್ತವನ್ನು ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗುತ್ತಿರುವ  ಮಾಹಿತಿ ಆಗಾಗ ಕೇಳಿಬರುತ್ತಿದ್ದು, ಈಗ ಅದೇ ಸಾಲಿಗೆ ಟಾಲಿವುಡ್ ನ ನಟರೊಬ್ಬರು ಸೇರಿದ್ದಾರೆ.

 
ಟಾಲಿವುಡ್ ನ ಪ್ರಿನ್ಸ್ ಮಹೇಶ್ ಬಾಬು ಅವರು ಎರಡು ಗ್ರಾಮಗಳನ್ನು ದತ್ತು ತೆಗೆದುಕೊಂಡು ಅದರ ಅಭಿವೃದ್ಧಿಗೆ ಧನ ಸಹಾಯ ಮಾಡುತ್ತಿರುವುದರ ಜೊತೆಗೆ ಇದೀಗ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಬಾಲಕನೊಬ್ಬನ ಚಿಕಿತ್ಸೆಗೆ ಹಣ ನೀಡಿ ಸಾವಿನ ದವಡೆಯಿಂದ ಬಾಲಕನನ್ನು ಕಾಪಾಡಿ ಎಲ್ಲರ ಮೆಚ್ಚುಗೆಗೆ  ಪಾತ್ರರಾಗಿದ್ದಾರೆ. ಈ ಬಗ್ಗೆ ಅವರು ಎಲ್ಲೂ ಬಹಿರಂಗಪಡಿಸಿರಲಿಲ್ಲ. ಆದರೆ ಬಾಲಕನ ಕುಟುಂಬದ ಸದಸ್ಯರೊಬ್ಬರು ಈ ಬಗ್ಗೆ ಸಾಮಾಜಿಕ ತಾಣಗಳಲ್ಲಿ ತಿಳಿಸಿ ಧನ್ಯವಾದ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸಮಾರಂಭವೊಂದರಲ್ಲಿ ದೀಪಿಕಾ ಪಡುಕೋಣೆ ಅವರು ಕಣ್ಣೀರು ಹಾಕಿದ್ದು ಯಾಕೆ…?