Select Your Language

Notifications

webdunia
webdunia
webdunia
webdunia

ಭಾರತ-ಆಸ್ಟ್ರೇಲಿಯಾ ಟಿ20 ಮೊದಲ ಪಂದ್ಯ ಬೆಂಗಳೂರಿನಲ್ಲಿ ನಡೆಯಲ್ಲ! ಕಾರಣ ಬಹಿರಂಗ

ಭಾರತ-ಆಸ್ಟ್ರೇಲಿಯಾ ಟಿ20 ಮೊದಲ ಪಂದ್ಯ ಬೆಂಗಳೂರಿನಲ್ಲಿ ನಡೆಯಲ್ಲ! ಕಾರಣ ಬಹಿರಂಗ
ಮುಂಬೈ , ಶನಿವಾರ, 2 ಫೆಬ್ರವರಿ 2019 (11:29 IST)
ಮುಂಬೈ: ಮುಂಬರುವ ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಟಿ20 ಸರಣಿಯ ಮೊದಲ ಪಂದ್ಯ ಈ ಹಿಂದೆ ನಿಗದಿಯಾದಂತೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿಲ್ಲ.


ಟಿ20 ಪಂದ್ಯವನ್ನು ಬೆಂಗಳೂರಿನಿಂದ ವಿಶಾಖಪಟ್ಟಣಕ್ಕೆ ಶಿಫ್ಟ್ ಮಾಡಲಾಗಿದೆ. ಇದು ಕರ್ನಾಟಕದ ಕ್ರಿಕೆಟ್ ಅಭಿಮಾನಿಗಳಿಗೆ ತೀವ್ರ ನಿರಾಸೆ ತರಲಿದೆ.  ಫೆಬ್ರವರಿ 24 ರಂದು ಈ ಪಂದ್ಯ ನಿಗದಿಯಾಗಿತ್ತು.

ಆದರೆ ಅದೇ ದಿನ ಬೆಂಗಳೂರಿನಲ್ಲಿ ಏರ್ ಶೋ ಮತ್ತು ಪ್ರಧಾನಿ ಮೋದಿ ಕೂಡಾ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿರುವುದರಿಂದ ಭದ್ರತಾ ಕಾರಣಗಳಿಗಾಗಿ ಪಂದ್ಯವನ್ನು ವಿಶಾಖಪಟ್ಟಣಕ್ಕೆ ಶಿಫ್ಟ್ ಮಾಡಲಾಗಿದೆ. ಇದರ ಬದಲು ಫೆಬ್ರವರಿ 27 ರಂದು ನಡೆಯಬೇಕಿರುವ ದ್ವಿತೀಯ ಟಿ20 ಪಂದ್ಯವನ್ನು ಬೆಂಗಳೂರಿನಲ್ಲಿ ನಡೆಸಲು ಬಿಸಿಸಿಐ ಉದ್ದೇಶಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ಆಸ್ಟ್ರೇಲಿಯಾ ಟಿ20 ಮೊದಲ ಪಂದ್ಯ ಬೆಂಗಳೂರಿನಲ್ಲಿ ನಡೆಯಲ್ಲ! ಕಾರಣ ಬಹಿರಂಗ