Select Your Language

Notifications

webdunia
webdunia
webdunia
webdunia

ರಣಜಿ ಟ್ರೋಫಿ ಕ್ರಿಕೆಟ್: ಕರ್ನಾಟಕಕ್ಕೆ ಇನಿಂಗ್ಸ್ ಗೆಲುವು

ರಣಜಿ ಟ್ರೋಫಿ ಕ್ರಿಕೆಟ್: ಕರ್ನಾಟಕಕ್ಕೆ ಇನಿಂಗ್ಸ್ ಗೆಲುವು
ಪುಣೆ , ಶನಿವಾರ, 4 ನವೆಂಬರ್ 2017 (11:41 IST)
ಪುಣೆ: ನಿರೀಕ್ಷಿಸಿದಂತೆಯೇ ಕರ್ನಾಟಕ ಮಹಾರಾಷ್ಟ್ರ ವಿರುದ್ಧ ರಣಜಿ ಟ್ರೋಫಿ ಪಂದ್ಯದಲ್ಲಿ ಇನಿಂಗ್ಸ್ ಅಂತರದಿಂದ ಗೆಲುವು ಸಾಧಿಸಿದೆ. ಇದರೊಂದಿಗೆ ಈ ಋತುವಿನಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದೆ.

 
ನಿನ್ನೆ 4 ವಿಕೆಟ್ ಕಳೆದುಕೊಂಡು ದಿನದಾಟ ಮುಗಿಸಿದ್ದ ಮಹಾರಾಷ್ಟ್ರ ಇಂದು 247 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಗಿದೆ. ಇದರೊಂದಿಗೆ ಇನಿಂಗ್ಸ್ ಮತ್ತು 136 ರನ್ ಗಳ ಅಂತರದಿಂದ ಸೋಲುಂಡಿದೆ.

ಕರ್ನಾಟಕ ಪರ ನಾಯಕ ವಿನಯ್ ಕುಮಾರ್ ಮಾರಕ ದಾಳಿ ಸಂಘಟಿಸಿ 6 ವಿಕೆಟ್ ಕಬಳಿಸಿದರು. ಇವರಿಗೆ ಉತ್ತಮ ಸಾಥ್ ನೀಡಿದ ಪವನ್ ದೇಶಪಾಂಡೆ 2 ವಿಕೆಟ್ ಹಾಗೂ ಸ್ಟುವರ್ಟ್ ಬಿನ್ನಿ, ಅಭಿಮನ್ಯು ಮಿಥುನ್ ತಲಾ 1 ವಿಕೆಟ್ ಕಿತ್ತು ಹ್ಯಾಟ್ರಿಕ್ ಗೆಲುವಿಗೆ ಮುನ್ನುಡಿ ಬರೆದರು. ತ್ರಿಶಕ ಗಳಿಸಿದ್ದ ಮಯಾಂಕ್ ಅಗರ್ವಾಲ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ಈ ಗೆಲುವಿನೊಂದಿಗೆ ಕರ್ನಾಟಕ 20 ಅಂಕ ಗಳಿಸಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ವಿರಾಟ್-ಅನುಷ್ಕಾ ಲವ್ ಗುರು ಯಾರು ಗೊತ್ತಾ?!