Select Your Language

Notifications

webdunia
webdunia
webdunia
webdunia

ಕಾಮೆಂಟರಿ ಬಾಕ್ಸ್ ನಲ್ಲಿ ಕೂದಲೆಳೆಯಲ್ಲಿ ಅಪಾಯದಿಂದ ತಪ್ಪಿಸಿಕೊಂಡ ಸುನಿಲ್ ಗವಾಸ್ಕರ್, ಸಂಜಯ್ ಮಂಜ್ರೇಕರ್

ಕಾಮೆಂಟರಿ ಬಾಕ್ಸ್ ನಲ್ಲಿ ಕೂದಲೆಳೆಯಲ್ಲಿ ಅಪಾಯದಿಂದ ತಪ್ಪಿಸಿಕೊಂಡ ಸುನಿಲ್ ಗವಾಸ್ಕರ್, ಸಂಜಯ್ ಮಂಜ್ರೇಕರ್
ಲಕ್ನೋ , ಬುಧವಾರ, 7 ನವೆಂಬರ್ 2018 (09:27 IST)
ಲಕ್ನೋ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಲಕ್ನೋದ ವಾಜಪೇಯಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಟಿ20 ಪಂದ್ಯದ ಕಾಮೆಂಟರಿ ಮಾಡುತ್ತಿದ್ದ ಸುನಿಲ್ ಗವಾಸ್ಕರ್ ಮತ್ತು ಸಂಜಯ್ ಮಂಜ್ರೇಕರ್ ಕೂದಲೆಳೆಯಲ್ಲಿ ಅಪಾಯದಿಂದ ಪಾರಾಗಿದ್ದಾರೆ.

ಇಬ್ಬರೂ ದಿಗ್ಗಜರು ಕ್ರಿಕೆಟ್ ವೀಕ್ಷಕ ವಿವರಣೆ ನೀಡಲು ಕಾಮೆಂಟರಿ ಬಾಕ್ಸ್ ನ ಒಳಗೆ ಹೋಗುವ ಕೆಲವೇ ಸೆಕೆಂಡುಗಳ ಮೊದಲು ಅಲ್ಲಿನ ಗಾಜು ಒಡೆದು ಬಿದ್ದಿದೆ. ಅರೆಕ್ಷಣ ಮೊದಲು ಹೋಗಿದ್ದರೂ ಸುನಿಲ್ ಗವಾಸ್ಕರ್ ಮತ್ತು ಸಂಜಯ್ ಮಂಜ್ರೇಕರ್ ಗೆ ಗಾಯವಾಗುತ್ತಿತ್ತು.

ಹಲವು ದಿನಗಳ ನಂತರ ಈ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಪಂದ್ಯ ನಡೆದಿತ್ತು. ಒಂದು ವೇಳೆ ದುರ್ಘಟನೆ ನಡೆದಿದ್ದರೆ ಇದು ಮೈದಾನದ ಸಿಬ್ಬಂದಿಗೆ ಮುಜುಗರವುಂಟು ಮಾಡುವ ವಿಚಾರವಾಗುತ್ತಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಹೈದರಾಬಾದ್ ಬಿಟ್ಟು ಶಿಖರ್ ಧವನ್ ಡೆಲ್ಲಿ ಡೇರ್ ಡೆವಿಲ್ಸ್ ತಂಡ ಸೇರಿದ್ದರ ಕಾರಣವೇನು ಗೊತ್ತಾ?