Select Your Language

Notifications

webdunia
webdunia
webdunia
webdunia

ರೋಹಿತ್ ಶರ್ಮಾ ಕ್ಯಾಪ್ಟನ್ಸಿ ಕಳೆದುಕೊಂಡ ಬೆನ್ನಲ್ಲೇ ಸೂರ್ಯಕುಮಾರ್, ಜಸ್ಪ್ರೀತ್ ಬುಮ್ರಾ ಶಾಕಿಂಗ್ ಪ್ರತಿಕ್ರಿಯೆ

ರೋಹಿತ್ ಶರ್ಮಾ ಕ್ಯಾಪ್ಟನ್ಸಿ ಕಳೆದುಕೊಂಡ ಬೆನ್ನಲ್ಲೇ ಸೂರ್ಯಕುಮಾರ್, ಜಸ್ಪ್ರೀತ್ ಬುಮ್ರಾ ಶಾಕಿಂಗ್ ಪ್ರತಿಕ್ರಿಯೆ
ಮುಂಬೈ , ಶನಿವಾರ, 16 ಡಿಸೆಂಬರ್ 2023 (13:12 IST)
Photo Courtesy: Twitter
ಮುಂಬೈ: ರೋಹಿತ್ ಶರ್ಮಾರನ್ನು ಕ್ಯಾಪ್ಟನ್ಸಿಯಿಂದ ಹೊರಹಾಕಿದ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ಸಹ ಆಟಗಾರರಾದ ಸೂರ್ಯಕುಮಾರ್ ಯಾದವ್, ಜಸ್ಪ್ರೀತ್ ಬುಮ್ರಾ ಇನ್ ಸ್ಟಾಗ್ರಾಂ ಸ್ಟೋರಿ ವೈರಲ್ ಆಗಿದೆ.

ಕೆಲವು ದಿನಗಳ ಹಿಂದೆ ಹಾರ್ದಿಕ್ ಪಾಂಡ್ಯರನ್ನು ಮುಂಬೈ ಖರೀದಿ ಮಾಡಿಕೊಂಡಾಗ ಬುಮ್ರಾ ಕೆಲವೊಮ್ಮೆ ಮೌನವೇ ಎಲ್ಲದಕ್ಕೂ ಉತ್ತರವಾಗುತ್ತದೆ ಎಂದು ಇನ್ ಸ್ಟಾಗ್ರಾಂನಲ್ಲಿ ಬರೆದು ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದರು.

ಇದೀಗ ರೋಹಿತ್ ಶರ್ಮಾರನ್ನು ಹೊರಹಾಕಿದ ಬೆನ್ನಲ್ಲೇ ಬುಮ್ರಾ ಇನ್ ಸ್ಟಾ ಸ್ಟೋರಿಯಲ್ಲಿ ‘ಕೆಲವೊಮ್ಮೆ ಆಸೆಬುರುಕರಾಗಿರಬೇಕು, ತೀರಾ ವಿಧೇಯರಾಗಿರುವುದು ಕೆಲಸಕ್ಕೆ ಬರುವುದಿಲ್ಲ’ ಎಂದು ಬರೆದುಕೊಂಡಿದ್ದಾರೆ. ಇದು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯನ್ನು ಉದ್ದೇಶಿಸಿಯೇ ಬರೆಯಲಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಇನ್ನು, ಮತ್ತೊಬ್ಬ ಮುಂಬೈ ಆಟಗಾರ ಸೂರ್ಯಕುಮಾರ್ ಯಾದವ್, ಹೃದಯ ಚೂರಾದ ಇಮೋಜಿಯನ್ನು ಇನ್ ಸ್ಟಾಗ್ರಾಂನಲ್ಲಿ ಪ್ರಕಟಿಸಿದ್ದಾರೆ. ಆ ಮೂಲಕ ತಮ್ಮ ಮೆಚ್ಚಿನ ಕ್ಯಾಪ್ಟನ್ ಗೆ ಕೊಕ್ ನೀಡಿರುವ ಬಗ್ಗೆ ಬೇಸರ ಹೊರಹಾಕಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ಇಂಗ್ಲೆಂಡ್ ಮಹಿಳೆಯರ ಟೆಸ್ಟ್: ಹರ್ಮನ್ ಪ್ರೀತ್ ಪಡೆಗೆ ಭರ್ಜರಿ ಜಯ