Select Your Language

Notifications

webdunia
webdunia
webdunia
webdunia

ಸೆಹ್ವಾಗ್ ನಂತರ ಪುಲ್ವಾಮಾ ಹುತಾತ್ಮ ಯೋಧರಿಗೆ ಈ ರೀತಿ ನೆರವಾದ ಶಿಖರ್ ಧವನ್

ಸೆಹ್ವಾಗ್ ನಂತರ ಪುಲ್ವಾಮಾ ಹುತಾತ್ಮ ಯೋಧರಿಗೆ ಈ ರೀತಿ ನೆರವಾದ ಶಿಖರ್ ಧವನ್
ನವದೆಹಲಿ , ಸೋಮವಾರ, 18 ಫೆಬ್ರವರಿ 2019 (09:07 IST)
ನವದೆಹಲಿ: ಪುಲ್ವಾಮಾದಲ್ಲಿ ಉಗ್ರರ ಪೈಶಾಚಿಕ ಕೃತ್ಯದಿಂದ ಪ್ರಾಣ ತ್ಯಾಗ ಮಾಡಿದ ಭಾರತೀಯ ಯೋಧರ ಕುಟುಂಬಗಳಿಗೆ ಶಿಖರ್ ಧವನ್ ನೆರವಿನ ಹಸ್ತ ಚಾಚಿದ್ದಾರೆ.


ಇದಕ್ಕೂ ಮೊದಲು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಹುತಾತ್ಮ ಯೋಧರ ವಿದ್ಯಾಭ್ಯಾಸದ ಖರ್ಚು ಭರಿಸುವುದಾಗಿ ಹೇಳಿದ್ದರು. ಇದೀಗ ಶಿಖರ್ ಧವನ್ ಹುತಾತ್ಮ ಯೋಧರಿಗೆ ಹಣಕಾಸಿನ ನೆರವು ನೀಡಲು ಮುಂದಾಗಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಂದೇಶ ನೀಡಿರುವ ಧವನ್ ತಾವು ಯೋಧರ ಕುಟುಂಬಕ್ಕೆ ಹಣಕಾಸಿನ ನೆರವು ನೀಡುವ ವಿಚಾರವನ್ನು ತಿಳಿಸಿದ್ದಾರಲ್ಲದೇ ಇತರರೂ ಈ ರೀತಿ ನೆರವಾಗಿ ಎಂದು ಕರೆ ನೀಡಿದ್ದಾರೆ.

ಇನ್ನು, ಪುಲ್ವಾಮಾದಲ್ಲಿ ಹುತಾತ್ಮರಾದ ಯೋಧರ ಕುಟುಂಬಗಳಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬಿಸಿಸಿಐ 5 ಕೋಟಿ ರೂ. ನೆರವು ನೀಡುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ವಿಶ್ವಕಪ್ ನಲ್ಲಿ ಪಾಕ್ ವಿರುದ್ಧ ಟೀಂ ಇಂಡಿಯಾ ಆಡುವಂತಿಲ್ಲ!