Select Your Language

Notifications

webdunia
webdunia
webdunia
webdunia

ಅನುಕಂಪದ ಬಿಜೆಪಿಗೆ ಆಶೀರ್ವಾದ

ಅನುಕಂಪದ ಬಿಜೆಪಿಗೆ ಆಶೀರ್ವಾದ
ಶಿವಮೊಗ್ಗ , ಶನಿವಾರ, 3 ಮೇ 2008 (13:33 IST)
ರಾಜ್ಯದಲ್ಲೆಡೆ ಬಿಜೆಪಿ ಅಲೆ ಬಿರುಗಾಳಿಯಂತೆ ಬೀಸಿರುವುದರಿಂದ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಚುನಾವಣಾ ಪೂರ್ವದಲ್ಲಿ ನಡೆದ ಸಮೀಕ್ಷೆಗೆ ವೈಜ್ಞಾನಿಕ ಆಧಾರವಿಲ್ಲ. ಏನಿದ್ದರೂ, ಬಿಜೆಪಿಯೇ ಮುಂದಿನ ಚುನಾವಣೆಯಲ್ಲಿ ಗೆಲ್ಲುವುದು. ಮಾತ್ರವಲ್ಲ, ನಿಚ್ಚಳ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಲಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮೇಲೆ ಹರಿಹಾಯ್ದ ಅವರು, ಕಾಂಗ್ರೆಸ್‌ನಲ್ಲಿ ನಾಯಕತ್ವದ ಕೊರತೆ ಇರುವುದರಿಂದ, ಚುನಾವಣೆಯಲ್ಲಿ ಸ್ಥಾನ ಪಡೆಯುವುದೇ ಕಷ್ಟವಾಗಿದೆ. ಆದರೆ ಬಿಜೆಪಿಗೆ ಅನುಕಂಪದ ಅಲೆಯಿರುವುದರಿಂದ ಬಿಜೆಪಿ ಸಂಪೂರ್ಣ ಬಹುಮತ ಪಡೆಯಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಸ್ಥಿರ ಸರ್ಕಾರದ ಬಗ್ಗೆ ಜನತೆ ಒಲವು ವ್ಯಕ್ತಪಡಿಸುತ್ತಿರುವುದರಿಂದ ಬಿಜೆಪಿಗೆ ಹೆಚ್ಚಿನ ಮತ ನೀಡಿ ಜನತೆ ಬಿಜೆಪಿಗೆ ಅಧಿಕಾರವನ್ನು ನೀಡಲಿದ್ದಾರೆ ಎಂದು ತಿಳಿಸಿದರು.

Share this Story:

Follow Webdunia kannada