Select Your Language

Notifications

webdunia
webdunia
webdunia
webdunia

ತೊಂಡೆಕಾಯಿ ತಿನ್ನುವುದರಿಂದ ಆಗುವ ಲಾಭವೇನು?

ತೊಂಡೆಕಾಯಿ ತಿನ್ನುವುದರಿಂದ ಆಗುವ ಲಾಭವೇನು?
ಬೆಂಗಳೂರು , ಮಂಗಳವಾರ, 19 ಜೂನ್ 2018 (15:25 IST)
ತೊಂಡೆಕಾಯಿ ಹೆಚ್ಚು ಫೈಬರ್ ಅಂಶವನ್ನು ಹೊಂದಿದೆ. ಇದರಲ್ಲಿ ವಿಟಮಿನ್ ಎ, ಬಿ1, ಸಿ ಮತ್ತು ಕ್ಯಾಲ್ಸಿಯಂ ಇರುತ್ತದೆ. ಇದರಲ್ಲಿ ಕ್ಯಾಲೊರಿಗಳು ಕಡಿಮೆಯಿದ್ದು ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿರಿಸಲು ಸಹಕಾರಿಯಾಗಿದೆ. ಕಿಡ್ನಿಸ್ಟೋನ್ ಸಮಸ್ಯೆ ಎದುರಿಸುತ್ತಿರುವವರಿಗೆ ತೊಂಡೆಕಾಯಿ ರಾಮಬಾಣವಾಗಿದೆ. ವಾರಕ್ಕೊಮ್ಮೆಯಾದರೂ ತೊಂಡೆಕಾಯಿ ತಿಂದರೆ ಉತ್ತಮ ಆರೋಗ್ಯ ನಿಮ್ಮದಾಗುತ್ತದೆ.
* ತೊಂಡೆಕಾಯಿಯನ್ನು ಹೆಚ್ಚಾಗಿ ಸೇವಿಸುವುದರಿಂದ ಕಫದ ಸಮಸ್ಯೆ ದೂರವಾಗುತ್ತದೆ.
 
* ತೊಂಡೆಕಾಯಿಯಲ್ಲಿರುವ ಬೀಜಗಳು ಮಲಬದ್ಧತೆಯನ್ನು ಸಮಸ್ಯೆಯನ್ನು ನಿವಾರಿಸುತ್ತದೆ ಮತ್ತು ಮಲ ವಿಸರ್ಜನೆಗೆ ಸಂಬಂಧಿಸಿದ ಸಮಸ್ಯೆಯನ್ನು ಕೂಡ ಗುಣಪಡಿಸುತ್ತದೆ.
 
* ದೇಹದ ಯಾವುದೇ ಭಾಗದಲ್ಲಿ ಹುಳು ಕಚ್ಚಿ ಗುಳ್ಳೆಗಿದ್ದರೆ ತೊಂಡೆಕಾಯಿಯ ಎಲೆಗಳನ್ನು ಜಜ್ಜಿ ಹಚ್ಚಿದರೆ ನೋವು ನಿವಾರಣೆಯಾಗುತ್ತದೆ.
 
* ವಿಟಮಿನ್ ‘ಸಿ’, ವಿಟಮಿನ್ ‘ಬಿ2’, ವಿಟಮಿನ್ ‘ಬಿ 3’ ಹೇರಳವಾಗಿರುವ ತೊಂಡೆಕಾಯಿ ನಮ್ಮ ರಕ್ತ ನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ.
 
* ತೊಂಡೆಕಾಯಿ ಎಲೆ ರಸವನ್ನು ನೀರಲ್ಲಿ ಬೆರೆಸಿ ದಿನಕ್ಕೆ 3 ಬಾರಿ ಸೇವಿಸಿದರೆ ದೇಹದ ಉಷ್ಣತೆ ಕಡಿಮೆಯಾಗುತ್ತದೆ.
 
* 2 ಚಮಚ ತೊಂಡೆಕಾಯಿ ಎಲೆಯ ರಸವನ್ನು ಅರ್ಧ ಬಟ್ಟಲು ಮೊಸರಿನ ಜತೆ ದಿನಕ್ಕೆ 2 ಬಾರಿ ಸೇವಿಸಿದರೆ ಭೇದಿ ನಿಲ್ಲುತ್ತದೆ.
 
* ತೊಂಡೆಕಾಯಿಯ ಹಸಿ ಹಣ್ಣನ್ನು ದಿನಕ್ಕೆ ಎರಡರಂತೆ ಸೇವಿಸಿದರೆ, ಒಣಗಿರುವ ಚರ್ಮ ಮೃದುವಾಗುತ್ತದೆ ಹಾಗೂ ಮಧುಮೇಹ ಗುಣವಾಗುತ್ತದೆ. 
 
* ದೇಹದಲ್ಲಿ ಗಂದೆಗಳು ಮತ್ತು ಕಜ್ಜಿ ಆಗಿದ್ದರೆ ತೊಂಡೆಕಾಯಿ ಎಲೆಗಳನ್ನು ಜಜ್ಜಿ ಪೇಸ್ಟ್‌ ಮಾಡಿ ಆ ಜಾಗಕ್ಕೆ ಲೇಪ ಮಾಡಿದರೆ ಗಂದೆಗಳು ಶಮನವಾಗುತ್ತವೆ. 
 
* ಋತುಸ್ರಾವದ ಸಂದರ್ಭದಲ್ಲಿ ತೊಂಡೆಕಾಯಿಯನ್ನು ಸೇವಿಸುವುದರಿಂದ ಮುಟ್ಟಿನ ನೋವು ಕಡಿಮೆಯಾಗುತ್ತದೆ.
 
* ತೊಂಡೆಕಾಯಿಯಲ್ಲಿ ಕಡಿಮೆ ಕ್ಯಾಲೊರಿಗಳಿರುತ್ತದೆ ಮತ್ತು ಹೆಚ್ಚು ಹೊತ್ತು ನಿಮ್ಮ ಹೊಟ್ಟೆಯನ್ನು ತುಂಬಿದಂತಿರಿಸುತ್ತದೆ. ಇದರಿಂದ ನೀವು ಸುಲಭವಾಗಿ ತೂಕ ಕಳೆದುಕೊಳ್ಳಬಹುದು.
 
* ಒಂದು ಲೋಟ ತೊಂಡೆಕಾಯಿ ಎಲೆಯ ರಸವನ್ನು ಒಂದು ಲೋಟ ಎಳ್ಳೆಣ್ಣೆ ಜತೆ ಕುದಿಸಿ ತಯಾರಿಸಿದ ಎಣ್ಣೆಯನ್ನು ಚರ್ಮದ ಕಾಯಿಲೆಗೆ ಉಪಯೋಗಿಸಬಹುದು.
 
* ಪೊಟ್ಯಾಸಿಯಂ ಹೆಚ್ಚಿರುವ ತೊಂಡೆಕಾಯಿ ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
 
* ಕಣ್ಣುಗಳು ಉರಿಯುತ್ತಿದ್ದರೆ ಒಂದು ಲೋಟ ನೀರಿಗೆ ಒಂದು ಲೋಟ ತೊಂಡೆಕಾಯಿ ಎಲೆಯ ರಸ ಸೇರಿಸಿ ಒಂದು ಲೋಟ ರಸ ಆಗುವವರೆಗೆ ಚೆನ್ನಾಗಿ ಕುದಿಸಿ. ಆ ರಸವನ್ನು ದಿನಕ್ಕೆ 3 ಬಾರಿ ಸೇವಿಸಿದರೆ ಕಣ್ಣುರಿ ನಿವಾರಣೆಯಾಗುತ್ತದೆ.
 
* ಒಂದು ಲೋಟ ತೊಂಡೆಕಾಯಿ ಎಲೆಯ ರಸವನ್ನು ಒಂದು ಲೋಟ ಎಳ್ಳೆಣ್ಣೆ ಜತೆ ಕುದಿಸಿ ಆ ಎಣ್ಣೆಯನ್ನು ಚರ್ಮದ ಮೇಲೆ ಹಚ್ಚಿದರೆ ಸೋರಿಯಾಸಿಸ್‌ನಂತಹ ಚರ್ಮದ ಸಮಸ್ಯೆ ಕಡಿಮೆಯಾಗುತ್ತದೆ.
 
* ತೊಂಡೆಕಾಯಿ ಕಫದ ಸಮಸ್ಯೆಯನ್ನು ನಿವಾರಿಸುತ್ತದೆ. ಅಲ್ಲದೆ ಇದು ರಕ್ತವನ್ನು ಶುದ್ಧೀಕರಿಸುತ್ತದೆ
 
* ಸಂಧಿಗಳಲ್ಲಿ ಊತ ಇದ್ದರೆ, ತೊಂಡೆ ಗಿಡದ ಎಲೆಗಳನ್ನು ಬೇವಿನ ಎಣ್ಣೆಯೊಂದಿಗೆ ಮಿಶ್ರಣ ಮಾಡಿ ಪೇಸ್ಟ್‌ ತಯಾರಿಸಿ, ಊತ ಇರುವ ಜಾಗದಲ್ಲಿ ಲೇಪನ ಮಾಡಿದರೆ ಊತ ಕಡಿಮೆಯಾಗುತ್ತದೆ.
 
* ಎಳೆಯ ತೊಂಡೆ ಕಾಯಿಯನ್ನು ಬಾಯಿಗೆ ಹಾಕಿ ಚೆನ್ನಾಗಿ ಜಗಿದರೆ ಬಾಯಿ ಹುಣ್ಣು ಕಡಿಮೆಯಾಗುತ್ತದೆ.
 
* ತೊಂಡೆಕಾಯಿಯಲ್ಲಿ ವಿಟಮಿನ್ ‘ಸಿ’ ಮತ್ತು ಬೀಟಾ ಕೆರೋಟಿನ್ ಹೆಚ್ಚಾಗುವುದರಿಂದ ಕ್ಯಾನ್ಸರ್ ಅನ್ನು ತಡೆಗಟ್ಟುವ ಸಾಮರ್ಥ್ಯವನ್ನು ಇದು ಹೊಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನೇರಳೆ ಹಣ್ಣಿನ ಆರೋಗ್ಯಕರ ಉಪಯೋಗಗಳು