Select Your Language

Notifications

webdunia
webdunia
webdunia
webdunia

ನಟ ಚೇತನ್ ಗೆ ಜೀವ ಬೆದರಿಕೆ

ನಟ ಚೇತನ್ ಗೆ ಜೀವ ಬೆದರಿಕೆ
ಬೆಂಗಳೂರು , ಶುಕ್ರವಾರ, 8 ಸೆಪ್ಟಂಬರ್ 2017 (09:40 IST)
ಬೆಂಗಳೂರು: ನಟ ಚೇತನ್ ಗೆ ಜೀವ ಬೆದರಿಕೆ ಎದುರಿಸುತ್ತಿದ್ದಾರೆ. ತನಗೆ ಜೀವ ಬೆದರಿಕೆ ಇದೆ ಎಂದು ನಟ ಚೇತನ್ ಶೇಷಾದ್ರಿಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

 
ಚೇತನ್ ಇತ್ತೀಚೆಗೆ ಸಾಮಾಜಿಕ ರಾಜಕೀಯ ಹೋರಾಟಗಳಲ್ಲಿ ಸಕ್ರಿಯರಾಗಿದ್ದರು. ಅಲ್ಲದೆ, ಲಿಂಗಾಯುತ ಪ್ರತ್ಯೇಕ ಧರ್ಮದ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದರು.

ತಮ್ಮ ಮನೆಯ ಸುತ್ತವೂ ಅನುಮಾನಾಸ್ಪದ ವ್ಯಕ್ತಿಗಳು ಓಡಾಡುತ್ತಿದ್ದಾರೆ ಎಂದು ಚೇತನ್ ಹೇಳಿಕೊಂಡಿದ್ದಾರೆ. ಇದೀಗ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ  ಬಳಿಕ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಚೇತನ್ ರಕ್ಷಣೆ ಕೊಡುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ.. ‘ನಿಮ್ಮ ದೇಶದಲ್ಲೇ ಬೀಫ್ ತಿಂದು ಭಾರತಕ್ಕೆ ಬನ್ನಿ’
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಗೌರಿ ಲಂಕೇಶ್ ಹತ್ಯೆ: ಸ್ಯಾಂಡಲ್ ವುಡ್ ತಾರೆಯರ ಪ್ರತಿಕ್ರಿಯೆ