Select Your Language

Notifications

webdunia
webdunia
webdunia
webdunia

ಕಿಚ್ಚ ಸುದೀಪ್ ಮೇಲೆ ಬಿಗ್ ಬಾಸ್ ಅಭಿಮಾನಿಗಳ ಆಕ್ರೋಶ!

ಕಿಚ್ಚ ಸುದೀಪ್ ಮೇಲೆ ಬಿಗ್ ಬಾಸ್ ಅಭಿಮಾನಿಗಳ ಆಕ್ರೋಶ!
ಬೆಂಗಳೂರು , ಶುಕ್ರವಾರ, 25 ಜನವರಿ 2019 (09:36 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನಲ್ಲಿ ಕಳೆದ ವಾರ ಕಾಮನ್ ಮ್ಯಾನ್ ಆಗಿ ಮನೆಯೊಳಗೆ ಎಂಟ್ರಿ ಪಡೆದಿದ್ದ ಧನರಾಜ್ ರನ್ನು ಹೊರ ಹಾಕಿದ್ದಕ್ಕೆ ಇದೀಗ ಅಭಿಮಾನಿಗಳು ಭಾರೀ ಸಿಟ್ಟಾಗಿದ್ದಾರೆ.


ಬಿಗ್ ಬಾಸ್ ನಲ್ಲಿ ಇತರ ಸ್ಪರ್ಧಿಗಳಿಗಿಂತಲೂ ಹೆಚ್ಚು ಪ್ರಾಮಾಣಿಕವಾಗಿ, ಅಂದಿನಿಂದ ಇಂದಿನವರೆಗೂ ತಮ್ಮ ವ್ಯಕ್ತಿತ್ವದಲ್ಲಿ ಯಾವುದೇ ಬದಲಾವಣೆಯಿಲ್ಲದೇ ನಿಯತ್ತಾಗಿ ಆಡಿದ ಧನರಾಜ್ ರನ್ನು ಹೀಗೆ ಏಕಾಏಕಿ ಮಧ್ಯರಾತ್ರಿ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಮಾಡಿದ್ದು, ವೀಕ್ಷಕರಿಗೆ ಸ್ವಲ್ಪವೂ ಇಷ್ಟವಾಗಿಲ್ಲ.

ಇದರ ಬಗ್ಗೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೀಕ್ಷಕರು ನಿರೂಪಕರೂ ಆಗಿರುವ ಕಿಚ್ಚ ಸುದೀಪ್ ಮೇಲೆಯೇ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇಂತಹ ಫಿಕ್ಸಿಂಗ್ ಶೋಗೆ ನಿರೂಪಕರಾಗಿದ್ದೀರಲ್ಲಾ ಎಂದು ಸುದೀಪ್ ಮೇಲೆಯೇ ಅಭಿಮಾನಿಗಳು ಹರಿಹಾಯ್ದಿದ್ದಾರೆ. ಅಷ್ಟೇ ಅಲ್ಲದೆ, ಕಲರ್ಸ್ ಕನ್ನಡದ ಬಗ್ಗೆಯೂ ಆಕ್ರೋಶ ಹೊರಹಾಕುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಕುಮಾರಸ್ವಾಮಿ ಪುತ್ರನ ಸೀತಾರಾಮ ಕಲ್ಯಾಣ ವೀಕ್ಷಿಸಿದ ಸಿದ್ದರಾಮಯ್ಯ, ಪರಮೇಶ್ವರ್