Select Your Language

Notifications

webdunia
webdunia
webdunia
webdunia

ಸ್ಯಾಂಡಲ್ ವುಡ್ ನ ನಿರ್ದೇಶಕನ ಕಾರಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಸ್ಯಾಂಡಲ್ ವುಡ್ ನ ನಿರ್ದೇಶಕನ ಕಾರಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಬೆಂಗಳೂರು , ಸೋಮವಾರ, 5 ನವೆಂಬರ್ 2018 (06:37 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ನಿರ್ದೇಶಕರೊಬ್ಬರ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಾಕಿರುವ ಘಟನೆ ಬೆಂಗಳೂರಿನ ಅವರ ನಿವಾಸದ ಮುಂದೆ ನಡೆದಿದೆ.


ನಿರ್ದೇಶಕ ಶ್ರೀನಿವಾಸ್ ಜಿ ಅವರು ಬೆಂಗಳೂರಿನ ನಾಗರಬಾವಿಯ ಎರಡನೇ ಹಂತದಲ್ಲಿರುವ ತಮ್ಮ ಮನೆಯ ಮುಂದೆ  ನಂಬರ್ KA -04 , MM- 7763 ಸಂಖ್ಯೆಯ ಚವರ್ ಲೇಟ್ ಕಾರು ನಿಲ್ಲಿಸಿದ್ದರು. ಆಗ ಮಧ್ಯರಾತ್ರಿಯ ವೇಳೆ ಬಂದ ಯಾರೋ ದುಷ್ಕರ್ಮಿಗಳು ಅವರ ಕಾರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.‌‌


ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಶ್ರೀನಿವಾಸ್ ಜಿ ಅವರು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಾರಿಗೆ ಬೆಂಕಿ ಹಚ್ಚುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.


 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೊಬ್ಬ ನಟಿಯ ಜೊತೆ ಲವ್ವಿ-ಡುವ್ವಿ ಶುರುಮಾಡಿದ್ರಾ ರಕ್ಷಿತ್ ಶೆಟ್ಟಿ