Select Your Language

Notifications

webdunia
webdunia
webdunia
webdunia

ದರ್ಶನ್ ಕೈ ಸರ್ಜರಿ ಸಕ್ಸಸ್: ಬೇಗ ಗುಣಮುಖರಾಗಿ ಎಂದ ಫ್ಯಾನ್ಸ್‌

darshan

Sampriya

ಬೆಂಗಳೂರು , ಸೋಮವಾರ, 8 ಏಪ್ರಿಲ್ 2024 (14:07 IST)
Photo Courtesy X
ಬೆಂಗಳೂರು:  ಕೈ ನೋವಿನಿಂದ ಬಳಲುತ್ತಿದ್ದ ಚಾಲೆಂಜಿಂಗ್ ಸ್ಟಾರ್  ದರ್ಶನ್ ಅವರಿಗೆ ಇಂದು ಯಶಸ್ವಿಯಾಗಿ ಸರ್ಜರಿ ಮಾಡಲಾಗಿದೆ. ಇಂದು ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದರ್ಶನ್‌ ಕೈಗೆ ಸರ್ಜರಿ ಮಾಡಲಾಗಿದ್ದು, ಅವರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸದ್ಯ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ.  ಸರ್ಜರಿ ಬಗ್ಗೆ ದರ್ಶನ್ ಅವರು ಏ.4ರಂದು ಮಂಡ್ಯದಲ್ಲಿ ನಡೆದ ಸುಮಲತಾ ಅವರ ಬಹಿರಂಗ ಸಭೆಯಲ್ಲಿ ಹೇಳಿಕೊಂಡಿದ್ದರು. ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅವರು ಆಸ್ಪತ್ರೆಗೆ ಅಡ್ಮಿಟ್ ಆಗಿ ಆಪರೇಷನ್‌ಗೆ ಒಳಗಾಗಲಿದ್ದೇನೆ ಎಂದು ತಿಳಿಸಿದ್ದರು.

'ಡೆವಿಲ್' ಸಿನಿಮಾದ ಸಾಹಸ ಸನ್ನಿವೇಶ ಶೂಟಿಂಗ್ ಸಮಯದಲ್ಲಿ ಅವರ ಕೈಗೆ ಏಟು ಬಿದ್ದಿದೆ. ಕೈಗೆ ಬೆಲ್ಟ್ ಕಟ್ಟಿಕೊಂಡು ಈವರೆಗೂ ಓಡಾಡುತ್ತಿದ್ದರು. ವೈದ್ಯರ ಸಲಹೆ ಮೇರೆಗೆ ದರ್ಶನ್ ಇದೀಗ ಆಪರೇಷನ್‌  ಮಾಡಿಸಿದ್ದಾರೆ. ಶಸ್ತ್ರಚಿಕಿತ್ಸೆಯ ನಂತರ ನಟ ವಿಶ್ರಾಂತಿ ಪಡೆಯುತ್ತಿರುವ ವಿಚಾರ ಕೇಳಿ ಅಭಿಮಾನಿಗಳಿಗೂ ಖುಷಿಯಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸೈಬರ್ ಠಾಣೆಗೆ ದೂರು ಕೊಟ್ಟ ನಟ ವಿಜಯ್ ದೇವರಕೊಂಡ