Select Your Language

Notifications

webdunia
webdunia
webdunia
webdunia

ಅಪಘಾತಕ್ಕೀಡಾದ ನಟ ಜೈ ಜಗದೀಶ್ ಕಾರು ; ನಟ ಪ್ರಾಣಾಪಾಯದಿಂದ ಪಾರು

ಅಪಘಾತಕ್ಕೀಡಾದ ನಟ ಜೈ ಜಗದೀಶ್ ಕಾರು ; ನಟ  ಪ್ರಾಣಾಪಾಯದಿಂದ ಪಾರು
ಬೆಂಗಳೂರು , ಶನಿವಾರ, 18 ಆಗಸ್ಟ್ 2018 (11:48 IST)
ಬೆಂಗಳೂರು : ಸ್ಯಾಂಡಲ್‍ವುಡ್‍ನ ಹಿರಿಯ ನಟ ಜೈ ಜಗದೀಶ್ ಅವರ ಕಾರು ಬೆಂಗಳೂರಿನಿಂದ ಚೆನ್ನರಾಯಪಟ್ಟಣ ಮೂಲಕ ಮಡಿಕೇರಿ ತೆರಳುತ್ತಿದ್ದ ವೇಳೆ ಅಪಘಾತಕ್ಕೀಡಾಗಿದೆ ಎಂಬುದಾಗಿ ತಿಳಿದುಬಂದಿದೆ.


ಶುಕ್ರವಾರದಂದು ಈ  ಅಪಘಾತ ಸಂಭವಿಸಿದ್ದು, ಮಾರ್ಗ ಮಧ್ಯೆ ಬಂದ ಬೈಕಿಗೆ ಡಿಕ್ಕಿಯಾಗೋದನ್ನು ತಪ್ಪಿಸಲು ಕಾರ್ ಟರ್ನ್ ಮಾಡಿದಾಗ  ರಸ್ತೆ ಬದಿಯ ಗದ್ದೆಗೆ ನುಗ್ಗಿ ಅಪಘಾತಕ್ಕೊಳಗಾಗಿದೆ.


ಸದ್ಯ ಜೈ ಜಗದೀಶ್ ಅವರಿಗೆ ಸಣ್ಣ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರನ್ನು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕೊಡಗು ಜನರ ನೆರವಿಗೆ ನಿಂತ ಸುದೀಪ್-ದರ್ಶನ್