Select Your Language

Notifications

webdunia
webdunia
webdunia
webdunia

ಈ ಬಾರಿ ಚುನಾವಣೆ ಪ್ರಚಾರ ಮಾಡುವ ಬಗ್ಗೆ ಕಿಚ್ಚ ಸುದೀಪ್ ಸ್ಪಷ್ಟನೆ

Kiccha Sudeep

Krishnaveni K

ಬೆಂಗಳೂರು , ಭಾನುವಾರ, 24 ಮಾರ್ಚ್ 2024 (10:31 IST)
Photo Courtesy: Twitter
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಿಚ್ಚ ಸುದೀಪ್ ಬಿಜೆಪಿ ಪರವಾಗಿ ಪ್ರಚಾರ ಮಾಡಿದ್ದರು. ಆದರೆ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ಮಾಡಲಿದ್ದಾರಾ ಎಂಬ ಪ್ರಶ್ನೆಗೆ ಅವರೇ ಉತ್ತರಿಸಿದ್ದಾರೆ.

ಕಳೆದ ಬಾರಿ ಬಸವರಾಜ ಬೊಮ್ಮಾಯಿವರ ಮೇಲಿನ ಆತ್ಮೀಯತೆಯಿಂದಾಗಿ ಪ್ರಚಾರ ಮಾಡಿದ್ದರು. ಆದರೆ ಆ ಚುನಾವಣೆಯಲ್ಲಿ ಬಿಜೆಪಿ ಸೋತಿತ್ತು. ಹೀಗಾಗಿ ಕಿಚ್ಚ ಸುದೀಪ್ ಕೂಡಾ ಟ್ರೋಲಿಗರಿಗೆ ಆಹಾರವಾಗಿದ್ದರು. ಆದರೆ ಈ ಬಾರಿ ಅವರು ಚುನಾವಣೆ ಪ್ರಚಾರ ಮಾಡುತ್ತಾರಾ ಎಂಬ ಅನುಮಾನ ಅಭಿಮಾನಿಗಳಲ್ಲಿದೆ. ಇದಕ್ಕೆ ಅವರು ಉತ್ತರ ನೀಡಿದ್ದಾರೆ.

ಕಿರುತೆರೆ ನಟ, ಸಿಸಿಎಸ್ ಸಹ ಆಟಗಾರ ಚಂದನ್ ಕುಮಾರ್ ಹೊಸ ಹೋಟೆಲ್ ಉದ್ಘಾಟನೆಗೆ ಬಂದಿದ್ದಾಗ ಅವರಿಗೆ ಈ ಪ್ರಶ್ನೆ ಎದುರಾಗಿದೆ. ಇದಕ್ಕೆ ಉತ್ತರಿಸಿರುವ ಅವರು ಕಳೆದ ಬಾರಿ ನಾನು ಯಾಕೆ ಚುನಾವಣೆ ಪ್ರಚಾರ ಮಾಡಿದೆ ಎಂಬುದಕ್ಕೆ ಸ್ಪಷ್ಟನೆ ನೀಡಿದ್ದೆ. ಈ ಬಾರಿ ಇದುವರೆಗೆ ಯಾರೂ ನನ್ನ ಕರೆದಿಲ್ಲ. ಕರೆದಾಗ ನೋಡೋಣ ಎಂದಿದ್ದಾರೆ.

ಇನ್ನು ರಾಜಕೀಯಕ್ಕೆ ಬರುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು ಆಯಾ ಕಾಲಕ್ಕೆ ಹೇಗೆ ಅನಿಸುತ್ತದೋ ಅದೇ ರೀತಿ ಮಾಡುವುದಾಗಿ ಹೇಳಿದ್ದಾರೆ. ಆ ಮೂಲಕ ರಾಜಕೀಯಕ್ಕೆ ಬರುವುದಕ್ಕೆ ಸ್ಪಷ್ಟವಾಗಿ ನಿರಾಕರಣೆಯನ್ನಂತೂ ಮಾಡಿಲ್ಲ. ಹೀಗಾಗಿ ಮುಂದೊಂದು ದಿನ ರಾಜಕೀಯಕ್ಕೆ ಬಂದರೂ ಬರಬಹುದು ಎಂದು ಸೂಚನೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಗ್ ಬಾಸ್ ಗೆದ್ದರೂ ಕಾರ್ತಿಕ್ ಮಹೇಶ್ ಗೆ ಇನ್ನೂ ಕಾರು ಸಿಕ್ಕಿಲ್ಲ