Select Your Language

Notifications

webdunia
webdunia
webdunia
webdunia

ಮತ್ತೆ ಸಂಕಷ್ಟಕ್ಕೆ ಗುರಿಯಾದ ನಟ ಸಾರ್ವಭೌಮ ಚಿತ್ರತಂಡ

ಮತ್ತೆ ಸಂಕಷ್ಟಕ್ಕೆ ಗುರಿಯಾದ ನಟ ಸಾರ್ವಭೌಮ ಚಿತ್ರತಂಡ
ಬೆಂಗಳೂರು , ಮಂಗಳವಾರ, 17 ಜುಲೈ 2018 (07:11 IST)
ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ನಟ ಸಾರ್ವಭೌಮ ಚಿತ್ರತಂಡಕ್ಕೆ  ಮಹಾಕೂಟದ ಪುಷ್ಕರಣೆಯಲ್ಲಿ ಚಿತ್ರೀಕರಣ ಮಾಡಲು ಸ್ಥಳೀಯರ ವಿರೋಧ ವ್ಯಕ್ತವಾದರೂ ಕೂಡ ಅವರ ಮನವೊಲಿಸಿ ಅಲ್ಲಿ ಕ್ಲೈಮಾಕ್ಸ್ ಚಿತ್ರೀಕರಣ ಮಾಡಿದ್ದಾರೆ. ಆದರೆ ಇದೀಗ ಈ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ.


ಹೌದು.ಚಿತ್ರತಂಡ ಜಿಲ್ಲಾಡಳಿತ ಇಲ್ಲವೆ ಪುರಾತತ್ವ ಇಲಾಖೆಯ ಅನುಮತಿ ಪಡೆಯದೇ ಇಲ್ಲಿ ಚಿತ್ರೀಕರಣ ನಡೆಸುವ ಮೂಲಕ ಇದೀಗ ಮತ್ತೆ ಸಂಕಷ್ಟಕ್ಕೆ ಗುರಿಯಾಗಿದೆ. ಚಿತ್ರದ ಶೂಟಿಂಗ್ ಗೆ ಸ್ಥಳೀಯರ ವಿರೋಧ ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಈ ವಿಚಾರ  ಪುರಾತತ್ವ ಇಲಾಖೆಯ ಗಮನಕ್ಕೆ ಬಂದಿದೆ.

 

ಮಹಾಕೂಟದ ಮಹಾಕೂಟೇಶ್ವರ್​ ದೇವಾಲಯದ ಸಂಕೀರ್ಣವು ರಾಜ್ಯ ಸಂರಕ್ಷತಾ ಸ್ಮಾರಕವಾಗಿದ್ದು, ಇದರ ವ್ಯಾಪ್ತಿಯಲ್ಲಿ ಯಾವುದೇ ನಿರ್ಮಾಣ ಕಾರ್ಯವನ್ನು ಇಲಾಖೆಯ ಅನುಮತಿ ಪಡೆಯದೇ ನಡೆಸಬಾರದು. ಆದರೆ, ಚಿತ್ರತಂಡ ಜಿಲ್ಲಾಡಳಿತ ಇಲ್ಲವೆ ಪುರಾತತ್ವ ಇಲಾಖೆಯ ಅನುಮತಿ ಪಡೆಯದೇ ಇಲ್ಲಿ ಚಿತ್ರೀಕರಣ ನಡೆಸುವ ಮೂಲಕ ನಿಯಮ ಉಲ್ಲಂಘಿಸಿದೆ. ಆದಕಾರಣ ಧಾರವಾಡ ಪುರಾತತ್ವ ಇಲಾಖೆ ಚಿತ್ರತಂಡದ ವಿರುದ್ಧ ಕ್ರಮ ಕಾನೂನು ಕ್ರಮ ಕೈಗೊಂಡು, ಚಿತ್ರೀಕರಣ ನಿಲ್ಲಿಸುವಂತೆ ಬಾಗಲಕೋಟೆ ಪೊಲೀಸ್ ವರಿಷ್ಠಾಧಿಕಾರಿ ಸಿಬಿ ರಿಷ್ಯಂತ್ ಅವರಿಗೆ ಮನವಿ ಮಾಡಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ


 

 


Share this Story:

Follow Webdunia kannada

ಮುಂದಿನ ಸುದ್ದಿ

ದಶಕಗಳ ನಂತರ ಮತ್ತೆ ಒಟ್ಟಿಗೆ ಒಂದೇ ಸಿನಿಮಾದಲ್ಲಿ ನಟಿಸಲು ಹೊರಟ ಬಾಲಿವುಡ್ ಸೆಲೆಬ್ರಿಟಿ ಕಪಲ್