Webdunia - Bharat's app for daily news and videos

Install App

ಹಿನ್ನೆಲೆ ಗಾಯಕಿ ಕೆ. ರಾಣಿ ವಿಧಿವಶ!

Webdunia
ಶನಿವಾರ, 14 ಜುಲೈ 2018 (15:53 IST)
ಹೈದರಾಬಾದ್: ಹಿನ್ನೆಲೆಗಾಯಕಿ ಕೆ. ರಾಣಿ (75)  ಅವರು ಶುಕ್ರವಾರ ( (ಜು.13) ರಾತ್ರಿ ವಿಧಿವಶರಾಗಿದ್ದಾರೆ. ರಾಣಿ ಅವರು ಕನ್ನಡದ ರತ್ನಗಿರಿ ರಹಸ್ಯ, ಸ್ಕೂಲ್ ಮಾಸ್ಟರ್, ಗಾಳಿಗೋಪುರ ಮುಂತಾದ ಚಿತ್ರಗಳಲ್ಲಿ ಹಾಡಿದ್ದರು. ಕೆ. ರಾಣಿ ಕೆಲ ಸಮಯದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಹೈದರಾಬಾದ್ ಕಲ್ಯಾಣನಗರದ ನಿವಾಸದಲ್ಲಿ ನಿಧನರಾಗಿದ್ದಾರೆ.


ಇನ್ನು ರಾಣಿ ಅವರು ಕನ್ನಡ, ತೆಲುಗು, ತಮಿಳು, ಹಿಂದಿ, ಸಿಂಹಳ, ಬಂಗಾಳಿ ಮಲಯಾಳಂ ಮತ್ತು ಉಜ್ಬೇಕ್  ಭಾಷೆಗಳಲ್ಲಿ ಹಾಡುತ್ತಿದ್ದರು. 500 ಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದ ರಾಣಿ  ಶ್ರೀಲಂಕಾದ ರಾಷ್ಟ್ರಗೀತೆಯನ್ನು ಹಾಡುವ ಮೂಲಕ ಪ್ರಸಿದ್ಧರಾಗಿದ್ದರು.  ಸಿಂಹಳ ಹಾಗು ಉಜ್ಬೇಕ್ ಭಾಷೆಗಳಲ್ಲಿ ಹಾಡಿದ್ದ ಭಾರತದ  ಮೊದಲ ಮಹಿಳಾ ಗಾಯಕಿ ಎನ್ನುವ ಕೀರ್ತಿ ರಾಣಿ ಅವರದಾಗಿತ್ತು.


ಮೋಕ್ಷಗುಂಡಮ್ ವಿಶ್ವೇಶ್ವರಯ್ಯ ಶತಮಾನೋತ್ಸವದಲ್ಲಿ ಭಾಗವಹಿಸಿ ಹಾಡುವಂತೆ ಕರ್ನಾಟಕ ಸರ್ಕಾರ ರಾಣಿಯವರಿಗೆ ಆಹ್ವಾನ ನೀಡಿತ್ತು. ಈ ಕಾರ್ಯಕ್ರಮಕ್ಕೆ ಆಗಮಿಸಲು ರಾಣಿಯವರಿಗೆ ಸರ್ಕಾರವೇ ವಿಶೇಷ ವಿಮಾನವನ್ನೂ ವ್ಯವಸ್ಥೆ ಕೂಡ ಮಾಡಿತ್ತು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments