Select Your Language

Notifications

webdunia
webdunia
webdunia
webdunia

`ನನಗೆ ಪೊಲೀಸರಿಂದ ಯಾವುದೇ ನೋಟಿಸ್ ಬಂದಿಲ್ಲ’

`ನನಗೆ ಪೊಲೀಸರಿಂದ ಯಾವುದೇ ನೋಟಿಸ್ ಬಂದಿಲ್ಲ’
ಬೆಂಗಳೂರು , ಸೋಮವಾರ, 2 ಅಕ್ಟೋಬರ್ 2017 (11:41 IST)
ಉದ್ಯಮಿ ಆದಿಕೇಶವುಲು ಮೊಮ್ಮಗ ಗೀತಾ ವಿಷ್ಣು ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಸ್ಯಾಂಡಲ್ ವುಡ್ ನಟರಿಗೆ ಸಂಕಷ್ಟ ಎದುರಾಗಿದೆ ಮಾಧ್ಯಮಗಳು ವರದಿಯಾಗಿವೆ.

ಹೌದು, ಸೆಪ್ಟೆಂಬರ್ 29ರ ರಾತ್ರಿ ಜಯನಗರದ ಸೌತ್ ಎಂಡ್ ಸರ್ಕಲ್`ನಲ್ಲಿ ಗೀತಾ ವಿಷ್ಣು ಅಡ್ಡಾದಿಡ್ಡಿ ಕಾರು ಚಲಾಯಿಸಿ ಅಪಘಾತ ಎಸಗಿದ್ದರು. ಈ ಸಂದರ್ಭ ಗೀತಾ ವಿಷ್ಣು ಜೊತೆ ಇಬ್ಬರು ಸ್ಯಾಂಡಲ್ ವುಡ್ ನಟರು ಸೇರಿ 8 ಮಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ ಎಂದು ವರದಿಯಾಗಿದೆ. ಸ್ಥಳೀಯರು ನೀಡಿದ ಮಾಹಿತಿ ಆಧರಿಸಿದ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಹಿರಿಯ ನಟ ದೇವರಾಜ್ ಪುತ್ರ ಪ್ರಣಾಮ್ ದೇವರಾಜ್, ನಟ ದಿಗಂತ್ ಅವರಿಗೂ ನೋಟಿಸ್ ನೀಡಲಾಗಿದೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ದಿಗಂತ್, ನನಗೆ ಯಾವುದೇ ನೋಟಿಸ್ ಬಂದಿಲ್ಲ. ಪೊಲೀಸರಿಂದ ಯಾವುದೇ ಕರೆಯೂ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

   

Share this Story:

Follow Webdunia kannada

ಮುಂದಿನ ಸುದ್ದಿ

ಐಶ್ವರ್ಯಾ ಬಚ್ಚನ್ ಪುತ್ರಿಯ ದಸರಾ ಸೆಲೆಬ್ರೇಷನ್ ಹೇಗಿತ್ತು ಗೊತ್ತಾ?