Select Your Language

Notifications

webdunia
webdunia
webdunia
webdunia

ಹೃದಯ ಶಸ್ತ್ರಚಿಕಿತ್ಸೆಗೊಳಗಾದ ನಿರ್ಮಾಪಕ ಕೆ.ಮಂಜು: ಚಿತ್ರರಂಗದ ಆಪ್ತರ ಭೇಟಿ

ಹೃದಯ ಶಸ್ತ್ರಚಿಕಿತ್ಸೆಗೊಳಗಾದ ನಿರ್ಮಾಪಕ ಕೆ.ಮಂಜು: ಚಿತ್ರರಂಗದ ಆಪ್ತರ ಭೇಟಿ
ಬೆಂಗಳೂರು , ಗುರುವಾರ, 10 ಜನವರಿ 2019 (16:26 IST)
ಬೆಂಗಳೂರು: ಹಲವು ಸೂಪರ್ ಹಿಟ್ ಸಿನಿಮಾಗಳ ನಿರ್ಮಾಪಕ ಕೆ.ಮಂಜು ಎದೆ ನೋವಿನಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ.


ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಹೃದಯದ ರಂದ್ರ ಸಮಸ್ಯೆಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಚಿತ್ರರಂಗದ ಕೆ. ಮಂಜು ಆಪ್ತರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಪಡ್ಡೆ ಹುಲಿ ಚಿತ್ರದ ಮೂಲಕ ತಮ್ಮ ಪುತ್ರ ಶ್ರೇಯಸ್ ನನ್ನು ಸಿನಿಮಾ ರಂಗಕ್ಕೆ ಪರಿಚಯಿಸಲು ಹೊರಟಿದ್ದ ಮಂಜು ಇದೀಗ ವೈಯಕ್ತಿಕವಾಗಿ ಆಘಾತ ಅನುಭವಿಸಿದ್ದಾರೆ. ಇದೀಗ ಅವರು ಆರೋಗ್ಯವಾಗಿದ್ದು, ಸದ್ಯದಲ್ಲೇ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂಬ ಸುದ್ದಿ ಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಹೃದಯ ಶಸ್ತ್ರಚಿಕಿತ್ಸೆಗೊಳಗಾದ ನಿರ್ಮಾಪಕ ಕೆ.ಮಂಜು: ಚಿತ್ರರಂಗದ ಆಪ್ತರ ಭೇಟಿ