Select Your Language

Notifications

webdunia
webdunia
webdunia
webdunia

ಚುನಾವಣೆ ಪ್ರಚಾರಕ್ಕೆ ಹೋಗ್ತಾರಾ ರಾಕಿಂಗ್ ಸ್ಟಾರ್ ಯಶ್

Yash

Krishnaveni K

ಬೆಂಗಳೂರು , ಗುರುವಾರ, 15 ಫೆಬ್ರವರಿ 2024 (11:32 IST)
Photo Courtesy: Twitter
ಬೆಂಗಳೂರು: ಇನ್ನೇನು ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಎಲ್ಲಾ ಪಕ್ಷಗಳೂ, ಅಭ್ಯರ್ಥಿಗಳೂ ತಮ್ಮ ಪರವಾಗಿ ಪ್ರಚಾರ ಮಾಡಲು ಸಿನಿಮಾ ಸ್ಟಾರ್ ಗಳನ್ನು ಕರೆತರುವ ಪ್ರಯತ್ನದಲ್ಲಿದ್ದಾರೆ.

ಈ ನಡುವೆ ರಾಕಿಂಗ್ ಸ್ಟಾರ್ ಯಶ್ ಗೆ ಚುನಾವಣಾ ಪ್ರಚಾರಕ್ಕೆ ಹೋಗ್ತೀರಾ ಎಂಬ ಪ್ರಶ್ನೆ ಎದುರಾಗಿದೆ. ಇದಕ್ಕೆ ಅವರು ಏನು ಉತ್ತರಿಸಿದ್ದಾರೆ ನೋಡಿ. ಸ್ನೇಹಿತ ಸೆಲೆಬ್ರಿಟಿ ಟ್ರೈನರ್ ಕಿಟ್ಟಿ ಅವರ ಜಿಮ್ ಉದ್ಘಾಟನೆಗೆಂದು ಕತ್ರಿಗುಪ್ಪೆಗೆ ಬಂದಿದ್ದಾಗ ಮಾಧ್ಯಮಗಳು ಯಶ್ ಗೆ ಈ ಬಾರಿಯೂ ಮಂಡ್ಯ ಕ್ಷೇತ್ರದಲ್ಲಿ ಚುನಾವಣೆ ಪ್ರಚಾರ ಮಾಡ್ತೀರಾ ಎಂದು ಪ್ರಶ್ನೆ ಕೇಳಿದ್ದಾರೆ.

ಇದಕ್ಕೆ ಉತ್ತರಿಸಿದ ಯಶ್, ಇದನ್ನೇ ಮಾಡುತ್ತಾ ಕೂರಬೇಕಾ? ರಾಜಕೀಯದ ಬಗ್ಗೆ ನಾನು ಮಾತನಾಡಲ್ಲ. ನನ್ನ ಗುರಿ ಬೇರೆಯೇ ಇದೆ’ ಎಂದಿದ್ದಾರೆ. ಆ ಮೂಲಕ ಈ ಬಾರಿ ಯಾವುದೇ ಅಭ್ಯರ್ಥಿ ಪರ ಅಥವಾ ಪಕ್ಷದ ಪರ ಚುನಾವಣಾ ಪ್ರಚಾರ ಮಾಡುವುದಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ.

ಕಳೆದ ಬಾರಿ 2019 ರ ಲೋಕಸಭೆ ಚುನಾವಣೆ ವೇಳೆ ಯಶ್ ಮತ್ತು ದರ್ಶನ್ ಮಂಡ್ಯ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸುಮಲತಾ ಅಂಬರೀಶ್ ಪರ ಜೋಡೆತ್ತುಗಳಂತೆ ಪ್ರಚಾರ ನಡೆಸಿದ್ದರು. ಬಿಸಿಲು ಲೆಕ್ಕಿಸದೇ ಇಬ್ಬರೂ ಸ್ಟಾರ್ ನಟರು ಪ್ರಚಾರ ನಡೆಸಿದ್ದರಿಂದ ಸುಮಲತಾ ಪ್ರಚಂಡ ಗೆಲುವು ಕಂಡಿದ್ದರು. ಈ ಬಾರಿಯೂ ಮಂಡ್ಯ ಕ್ಷೇತ್ರದಲ್ಲಿ ಸುಮಲತಾಗೆ ಟಿಕೆಟ್ ಸಿಕ್ಕರೆ ಪ್ರಚಾರ ನಡೆಸುವ ಬಗ್ಗೆ ಪತ್ರಕರ್ತರು ಯಶ್ ಗೆ ಪ್ರಶ್ನೆ ಕೇಳಿದ್ದರು. ಆದರೆ ಅದನ್ನು ಅವರು ಸ್ಪಷ್ಟವಾಗಿ ನಿರಾಕರಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಸಿದ್ದು, ಡಿಕೆಶಿ ಭೇಟಿ ಮಾಡಿದ ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಮಹೇಶ್