Select Your Language

Notifications

webdunia
webdunia
webdunia
webdunia

ಒಂದೇ ವೇದಿಕೆಯ ಮೇಲೆ ಪ್ರಶಸ್ತಿ ಸ್ವೀಕರಿಸಲಿರುವ ಸ್ಯಾಂಡಲ್ ವುಡ್ ನ ಸ್ಟಾರ್ ನಟರು

ಒಂದೇ ವೇದಿಕೆಯ ಮೇಲೆ ಪ್ರಶಸ್ತಿ ಸ್ವೀಕರಿಸಲಿರುವ ಸ್ಯಾಂಡಲ್ ವುಡ್ ನ ಸ್ಟಾರ್ ನಟರು
ಬೆಂಗಳೂರು , ಗುರುವಾರ, 16 ಆಗಸ್ಟ್ 2018 (10:11 IST)
ಬೆಂಗಳೂರು : ಇಂದು ಸಂಜೆ 6 ಗಂಟೆಗೆ  ಸ್ಯಾಂಡಲ್ ವುಡ್ ನ ಸ್ಟಾರ್ ನಟರಾದ ಕಿಚ್ಚ ಸುದೀಪ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಒಂದೇ ವೇದಿಕೆಯ ಮೇಲೆ ಕೆಂಪೇಗೌಡ ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ನಾಡಪ್ರಭು ಕೆಂಪೇಗೌಡ ದಿನಾಚರಣೆ ನಿಮಿತ್ತ ಬಿಬಿಎಂಪಿ ನೀಡುವ ಕೆಂಪೇಗೌಡ ಪ್ರಶಸ್ತಿಗೆ ಚಲನಚಿತ್ರ ಕ್ಷೇತ್ರದಿಂದ ಸುದೀಪ್ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ದರ್ಶನ್ ಅಭಿಮಾನಿಗಳು ಶಾಸಕ ಗೋಪಾಲಯ್ಯ ಅವರನ್ನು ಭೇಟಿ ಮಾಡಿ ದರ್ಶನ್ ಅವರಿಗೂ ಕೆಂಪೇಗೌಡ ಪ್ರಶಸ್ತಿ ನೀಡುವಂತೆ ಒತ್ತಾಯ ಮಾಡಿದ್ದಾರೆ.


ಇದೀಗ ಕಿಚ್ಚ ಸುದೀಪ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಬ್ಬರಿಗೂ ಒಂದೇ ವೇದಿಕೆಯ ಮೇಲೆ ಪ್ರಶಸ್ತಿ ನೀಡಲು ಬಿಬಿಎಂಪಿ ನಿರ್ಧಾರ ಮಾಡಿದೆ. ಇಂದು ಸಂಜೆ ನಗರದ ಗಾಜಿನ ಮನೆಯ ಒಂದೇ ವೇದಿಕೆಯಲ್ಲಿ ದರ್ಶನ್ ಸುದೀಪ್ ಒಟ್ಟಿಗೆ ಪ್ರಶಸ್ತಿ ಸ್ವೀಕರಿಸಲಿದ್ದು, ಕೆಂಪೇಗೌಡ ಪ್ರಶಸ್ತಿ ದರ್ಶನ್ ಸುದೀಪ್ ಅವರನ್ನು ಒಂದು ಮಾಡಲಿದೆ. ಸುದೀಪ್ ಪ್ರಶಸ್ತಿ ಸ್ವೀಕರಿಸಲು ಬರುವುದು ನಿಶ್ಚಿತವಾಗಿದ್ದು, ದರ್ಶನ್ ಕೂಡ ಆಗಮಿಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕಳ್ಳತನ ಮಾಡುತ್ತಿದ್ದ ಟಾಲಿವುಡ್ ನಟ ಅರೆಸ್ಟ್