Select Your Language

Notifications

webdunia
webdunia
webdunia
webdunia

ಪತ್ರಿಕಾಗೋಷ್ಟಿಯಲ್ಲಿ ಕಿತ್ತಾಡಿಕೊಂಡ 'ಆರೋಹಣ’ ಚಿತ್ರತಂಡ

ಪತ್ರಿಕಾಗೋಷ್ಟಿಯಲ್ಲಿ ಕಿತ್ತಾಡಿಕೊಂಡ 'ಆರೋಹಣ’ ಚಿತ್ರತಂಡ
ಬೆಂಗಳೂರು , ಮಂಗಳವಾರ, 21 ಆಗಸ್ಟ್ 2018 (10:33 IST)
ಬೆಂಗಳೂರು : ಸಂಭಾವನೆ ವಿಚಾರದಲ್ಲಿ 'ಆರೋಹಣ' ಚಿತ್ರದ ನಿರ್ಮಾಪಕ, ನಿರ್ದೇಶಕ ಹಾಗೂ ಕಲಾವಿದರ ನಡುವಿನ ವೈಮನಸ್ಸು ಉಂಟಾಗಿದ್ದು, ಇದೀಗ ಮೂರು ತಿಂಗಳಾದರೂ ತಮಗೆ ಪೇಮೆಂಟ್ ನೀಡದೆ ನಿರ್ಮಾಪಕರು ಸತಾಯಿಸುತ್ತಿದ್ದಾರೆ. ಕೇಳಿದರೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಚಿತ್ರದ ಸಹ ನಟ ರೋಹಿತ್ ಶೆಟ್ಟಿ ಆರೋಪಿಸಿದ್ದಾರೆ.


ಸಾಫ್ಟ್‌ವೇರ್ ಉದ್ಯೋಗಿ ಸುಶೀಲ್ ಕುಮಾರ್ ನಿರ್ಮಿಸಿ, ನಾಯಕರಾಗಿ ನಟಿಸಿರುವ 'ಆರೋಹಣ' ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಈ ತಿಂಗಳ ಕೊನೆಯಲ್ಲಿ,ಚಿತ್ರವನ್ನು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಅದಕ್ಕಾಗಿ ನಿರ್ದೇಶಕ ಶ್ರೀಧರ್ ಶೆಟ್ಟಿ ಚಿತ್ರ ತಂಡದೊಂದಿಗೆ ಪತ್ರಿಕಾಗೋಷ್ಟಿ ಕರೆದ್ದರೆ ಅಲ್ಲಿ ನಡೆದಿದ್ದೇ ಬೇರೆ.


ಪತ್ರಿಕಾಗೋಷ್ಟಿ ಗೆ ಆಗಮಿಸಿದ ಚಿತ್ರದ ಸಹ ನಟ ರೋಹಿತ್ 'ಮೊದಲು ಚಿತ್ರದಲ್ಲಿ ಅಭಿನಯಿಸಲು ಎರಡು ಲಕ್ಷ ಸಂಭಾವನೆಗೆ ಒಪ್ಪಿಕೊಂಡಿದ್ದೆ. 50 ಸಾವಿರ ಅಡ್ವಾನ್ಸ್ ಕೊಟ್ಟಿದ್ದರು. ಶೂಟಿಂಗ್ ಮುಗಿಸಿ, ಬಾಕಿ ಪೇಮೆಂಟ್ ಕೇಳಿದರೆ ನಿರ್ಮಾಪಕರು ಬೆದರಿಕೆ ಹಾಕುತ್ತಿದ್ದಾರೆ. ನನಗೆ ಅನ್ಯಾಯವಾಗಿದೆ' ಎಂದು ಬಹಿರಂಗವಾಗಿ ಆರೋಪಿಸಿದ್ದಾರೆ


ಆಗ ನಿರ್ಮಾಪಕ ಸುಶೀಲ್ ಕುಮಾರ್, 'ಇದು ನಿರ್ದೇಶಕರು ಮತ್ತು ರೋಹಿತ್ ನಡುವಿನ ಜಗಳ. ಇವರ ಜಗಳದಿಂದ ಚಿತ್ರಕ್ಕೆ ತೊಂದರೆಯಾಗಿದೆ. ಕೇಳಿದರೆ ನಿರ್ದೇಶಕರೇ ನನಗೇ ದನ ಕಾಯೋನು ಅಂತ ಅವಮಾನಿಸಿದರು' ಎಂದು ಆರೋಪಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನಿರ್ದೇಶಕ ಶ್ರೀಧರ್ ಹಾಗೆಲ್ಲಾ ನಾನು ಮಾತನಾಡಿಲ್ಲ. ಸುಮ್ಮನೆ ಆರೋಪ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ಕೊನೆಗೆ ಚಿತ್ರ ತಂಡ ಮಧ್ಯ ಪ್ರವೇಶಿಸಿ ಗಲಾಟೆ ನಿಲ್ಲಿಸಿತು. ಒಟ್ಟಿನಲ್ಲಿ ಚಿತ್ರತಂಡದೊಳಗಿನ ಜಗಳ ಬೀದಿಗೆ ಬಿದ್ದಂತಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕೊಡಗಿಗೆ ತಲುಪಿತು ರಾಕಿಂಗ್ ಸ್ಟಾರ್ ಯಶ್ ಮಾಡಿದ ಒಳ್ಳೆ ಕೆಲಸ!