Webdunia - Bharat's app for daily news and videos

Install App

ಅಧ್ಯಕ್ಷ ಸ್ಥಾನಕ್ಕೆ ಆಸೆಪಟ್ಟು ಲಕ್ಷಾಂತರ ರೂ. ಹಣ ಕಳೆದುಕೊಂಡ ಕಿರುತೆರೆ ನಟಿ

Webdunia
ಬುಧವಾರ, 12 ಸೆಪ್ಟಂಬರ್ 2018 (07:10 IST)
ಬೆಂಗಳೂರು : ಕಿರುತೆರೆ ನಟಿ ಸುಶ್ಮಿತಾ ಅಧ್ಯಕ್ಷ ಸ್ಥಾನಕ್ಕೆ ಆಸೆಪಟ್ಟು ಲಕ್ಷಾಂತರ ರೂ. ಹಣ ಕಳೆದುಕೊಂಡಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ.


ಕನ್ನಡದ ಹಲವು ಧಾರವಾಹಿಗಳಲ್ಲಿ ಸಹ ನಟಿಯಾಗಿ ನಟಿಸಿದ ನಟಿ ಸುಶ್ಮಿತಾ ಅವರಿಗೆ ರಘು ಚಂದ್ರಪ್ಪ ಹಾಗೂ ಸಂಗೀತಾ ಎಂಬುವವರು ಆದಿ ಶಕ್ತಿ ಮಹಿಳಾ ಸಂಘಕ್ಕೆ ರಾಜ್ಯಧ್ಯಕ್ಷೆಯಾಗಿ ಮಾಡುವುದಾಗಿ ಹೇಳಿ ಲಕ್ಷಾಂತರ ರೂ. ತೆಗೆದುಕೊಂಡು ವಂಚಿಸಿದ್ದಾರೆ. ಇವರ ಜೊತೆಗೆ ಅವರ ಸ್ನೇಹಿತೆ ಸರೋಜ ಎನ್ನುವವರಿಗೂ ವಂಚನೆಯಾಗಿದೆ ಎಂಬುದಾಗಿ ತಿಳಿದುಬಂದಿದೆ.


ಅಷ್ಟೇ ಅಲ್ಲದೇ ರಘು ಬಳಿ ಹಣ ವಾಪಾಸು ಕೊಡುವಂತೆ ಕೇಳಿದರೆ ಸುಶ್ಮಿತಾ ಹಾಗೂ ಸರೋಜ ಇಬ್ಬರಿಗೂ ಜೀವ ಬೆದರಿಕೆ ಹಾಕುತ್ತಿದ್ದಾನೆ. ಸದ್ಯ ಸರೋಜ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಐಪಿಸಿ 420, 418, ಹಾಗೂ 506 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments