Select Your Language

Notifications

webdunia
webdunia
webdunia
webdunia

ಹಣ ಕೊಟ್ಟರೆ ಮಾತ್ರ ಕಾರ್ಯಕ್ರಮಕ್ಕೆ ಬರುವುದಾಗಿ ಪ್ರಥಮ್ ಹೇಳಿದ್ದು ಯಾಕೆ ಗೊತ್ತಾ…?

ಹಣ ಕೊಟ್ಟರೆ ಮಾತ್ರ ಕಾರ್ಯಕ್ರಮಕ್ಕೆ ಬರುವುದಾಗಿ ಪ್ರಥಮ್ ಹೇಳಿದ್ದು ಯಾಕೆ ಗೊತ್ತಾ…?
ಬೆಂಗಳೂರು , ಶನಿವಾರ, 10 ಫೆಬ್ರವರಿ 2018 (06:46 IST)
ಬೆಂಗಳೂರು : ಬಿಗ್ ಬಾಸ್ ರಿಯಾಲಿಟಿ ಶೋ ನ ಸೀಸನ್ 4 ರ ವಿನ್ನರ್ ನಟ ಹಾಗೂ ನಿರ್ದೇಶಕ ಪ್ರಥಮ್ ಅವರು ಇನ್ಮುಂದೆ ಯಾವುದೇ ಕಾರ್ಯಕ್ರಮಕ್ಕೆ ತನ್ನನ್ನು ಕರೆಯುದಾದ್ರೆ ಹಣ ಕೊಟ್ಟರೆ ಮಾತ್ರ ಬರುವುದಾಗಿ ತಿಳಿಸಿದ್ದಾರೆ.


ಪ್ರಥಮ್ ಅವರು ಈ ರೀತಿಯಾಗಿ ನಿರ್ಧಾರ ತೆಗೆದುಕೊಳ್ಳಲು ಕಾರಣವೆನೆಂದರೆ ಅವರು ಮಂಗಳೂರಿನ ಬಳಿ ಇರುವ ಅನಾಥಾಶ್ರಮಕ್ಕೆ ತಮಗೆ ಬರುವ ಹಣದಲ್ಲಿ ಅರ್ಧ ನೀಡಲು  ನಿರ್ಧರಿಸಿದ್ದಾರೆ. ಈ ಬಗ್ಗೆಅವರು  ತಮ್ಮ ಫೇಸ್ ಬುಕ್ ನಲ್ಲಿ ‘ಇನ್ಮೇಲೆ ನನ್ನ ಕಾರ್ಯಕ್ರಮಕ್ಕೆ ಕರೆಯೋದಾದರೆ ಈ ಆಶ್ರಮಕ್ಕೆ ದುಡ್ಡು ಕೊಡಲೇಬೇಕು. ಇಲ್ಲ ಅಂದರೆ ನಾನು ಬರಲ್ಲ. ನಿಮ್ಮೆಲ್ಲರಲ್ಲೂ ಒಂದು ಮನವಿ, ಆ ಮುಸ್ಲಿಂ ಸಹೋದರಿ ತಬಸ್ಸುಮ್ ರಿಗೆ ಅಭಿನಂದಿಸುತ್ತಾ ದಯವಿಟ್ಟು ಈ ಖಾತೆಗೆ ನಿಮ್ಮ ಕೈಲಾದ ಸಹಾಯ ಮಾಡಿ. ನಿಮ್ಮ ಸಂಪೂರ್ಣ ದುಡ್ಡು ಆ ಮಕ್ಕಳ ನೆಮ್ಮದಿಯ ನಾಳಿನ ಬದುಕಿಗೆ ಆಗುತ್ತದೆ. ಆ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಫೋಟೋ ಮರೆಮಾಚಲಾಗಿದೆ. ಇನ್ಮೇಲೆ ನನ್ನ ಕಾರ್ಯಕ್ರಮಕ್ಕೆ ಕರೆದರೆ ಇಲ್ಲಿಗೂ ಸ್ವಲ್ಪ ದುಡ್ಡು ಕೊಡಲೇಬೇಕು.’ ಎಂದು ಬರೆದು ಪೋಸ್ಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನಟ ಅಭಿಷೇಕ್ ಬಚ್ಚನ್ 'ಮನ್ ಮರ್ಜಿಯಾನ್' ಚಿತ್ರಕ್ಕಾಗಿ ಮಾಡಿದ್ದೇನು ಗೊತ್ತಾ…?