Select Your Language

Notifications

webdunia
webdunia
webdunia
webdunia

ಮೈಸೂರು ಬಳಿ ರಸ್ತೆ ಅಪಘಾತಕ್ಕೆ 10 ಬಲಿ! ಪರಿಹಾರ ಘೋಷಿಸಿದ ಸಿಎಂ

ಮೈಸೂರು ಬಳಿ ರಸ್ತೆ ಅಪಘಾತಕ್ಕೆ 10 ಬಲಿ! ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು , ಮಂಗಳವಾರ, 30 ಮೇ 2023 (07:46 IST)
ಬೆಂಗಳೂರು : ಮೈಸೂರಿನಲ್ಲಿ ನಡೆದ ಖಾಸಗಿ ಬಸ್ ಹಾಗೂ ಇನ್ನೋವಾ ಕಾರಿನ ನಡುವಿನ ಭೀಕರ ಅಪಘಾತ 10 ಜನರ ಬಲಿ ಪಡೆದುಕೊಂಡಿದೆ. ದುರ್ಘಟನೆಗೆ ಆಘಾತ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಮೈಸೂರು ಜಿಲ್ಲೆಯ ಟಿ ನರಸೀಪುರ ಬಳಿ ಸಂಭವಿಸಿದ ಅಪಘಾತದಲ್ಲಿ 10 ಮಂದಿ ಸಾವಿಗೀಡಾದ ಸುದ್ದಿ ಕೇಳಿ ಸಂಕಟವಾಯಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ.

ದುರ್ಘಟನೆಯಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಹಿಜಬ್ ವಿವಾದದಿಂದ ಹೆಣ್ಣುಮಕ್ಕಳು ಶಿಕ್ಷಣ ವಂಚಿತರಾಗಿದ್ದಾರೆ ; ಸಮವಸ್ತ್ರ ಆದೇಶ ಪರಿಷ್ಕರಿಸಿ