Select Your Language

Notifications

webdunia
webdunia
webdunia
webdunia

ಹಸೆಮಣೆ ಏರಬೇಕಿದ್ದ ಯುವತಿ ಅನುಮಾನ್ಪದ ಸಾವು

ಹಸೆಮಣೆ ಏರಬೇಕಿದ್ದ ಯುವತಿ ಅನುಮಾನ್ಪದ ಸಾವು
bangalore , ಸೋಮವಾರ, 20 ನವೆಂಬರ್ 2023 (18:21 IST)
ಕಳೆದ ಹತ್ತು ವರ್ಷಗಳಿಂದ ಪ್ರೀತಿಸುತ್ತಿದ್ದ ಐಶ್ವರ್ಯ ಹಾಗೂ ಅಶೋಕ್ ಮದುವೆ ಫಿಕ್ಸ್ ಆಗಿತ್ತು. ಮದುವೆಗೆ ಇನ್ನೇನು ಎರಡು ದಿನ ಬಾಕಿ ಇತ್ತು. ಇದಕ್ಕಾಗಿ ಎಲ್ಲಾ ಸಿದ್ಧತೆಗಳು ಮಾಡಿಕೊಂಡಿದ್ದರು. ಆದ್ರೆ, ಹಸೆಮಣೆ ಏರಬೇಕಿದ್ದ ಯುವತಿಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ವಿಜಯನಗರದ ಟಿಬಿ ಕಾಲೋನಿಯ ಐಶ್ವರ್ಯ ಎಂಬ ಯುವತಿ ಮದುವೆಗೆ ಎರಡು ದಿನ ಬಾಕಿ ಇರುವಾಗಲೇ ಮೃತಪಟ್ಟಿದ್ದಾಳೆ.

ಮದುವೆ ಶಾಸ್ತ್ರಕ್ಕೆಂದು ಯುವಕನ ಮನೆಯವರು ಕರೆದುಕೊಂಡು ಹೋಗಿದ್ದಾರೆ. ಆದ್ರೆ, ಐಶ್ವರ್ಯ ವರನ ಮನೆಯಲ್ಲೇ ಪ್ರಾಣ ಬಿಟ್ಟಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಖಾಸಗಿ ಕಂಪನಿ‌ಯಲ್ಲಿ ಕೆಲಸ ಮಾಡುತ್ತಿದ್ದ ಐಶ್ವರ್ಯಳ ಮದುವೆ ಅಶೋಕ ಎನ್ನುವರ ಜೊತೆ ನವೆಂಬರ್ 23ಕ್ಕೆ ಫಿಕ್ಸ್ ಆಗಿತ್ತು. ಬೇರೆ-ಬೇರೆ ಜಾತಿಯವರಾಗಿದ್ದರೂ ಸಹ 10 ವರ್ಷದಿಂದ ಪ್ರೀತಿ ಮಾಡುತ್ತಿದ್ದ ಇವರಿಬ್ಬರು ಇನ್ನೇನು ಸಪ್ತಪದಿ ತುಳಿದು ಹೊಸ ಜೀವನ ಆರಂಭಿಸಬೇಕಿತ್ತು. ಆದ್ರೆ, ಯುವತಿ ಏಕಾಏಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

ಕಳೆದ 10 ದಿನಗಳಿಂದ ಪ್ರಿಯಕರನ ಮನೆ ಹೋಗಿದ್ದ ಯುವತಿ ಏಕಾಏಕಿ ಮೃತಪಟ್ಟಿದ್ದಾಳೆ. ಬಳಿಕ ನೇಣಿಗೆ ಶರಣಾಗಿದ್ದಾಳೆ ಎಂದು ಯುವತಿ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ನಾವೇ ಮದುವೆ ಮಾಡುತ್ತೇವೆ, ನೀವು ಬರುವುದು ಬೇಡ ಎಂದು ಅಶೋಕ್ ಮನೆಯವರು ಐಶ್ವರ್ಯಳ ಪೋಷಕರಿಗೆ ಹೇಳಿದ್ದರಂತೆ. ಆದ್ರೆ, ಇದೀಗ ಏಕಾಏಕಿ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಮದ್ವೆ ಮುನ್ನವೇ ಯುವತಿ ಸಾವನ್ನಪ್ಪಿರುವುದು ಪೋಷಕರಿಗೆ ಅನುಮಾನ ವ್ಯಕ್ತವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಿಳೆಯ ಮೇಲೆ ಅತ್ಯಾಚಾರ, ಹತ್ಯೆ ಶಂಕೆ: ಆರೋಪಿಗಳು ಎಸ್ಕೇಪ್