Select Your Language

Notifications

webdunia
webdunia
webdunia
webdunia

ಎಬಿಪಿಪಿ ಕಾರ್ಯಕರ್ತರಿಂದ ಅಸಹಕಾರ ಚಳುವಳಿ

ಎಬಿಪಿಪಿ ಕಾರ್ಯಕರ್ತರಿಂದ ಅಸಹಕಾರ ಚಳುವಳಿ
ಬೆಂಗಳೂರು , ಬುಧವಾರ, 17 ಆಗಸ್ಟ್ 2016 (12:38 IST)
ಭಾರತೀಯ ಸೇನೆ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿದ ಪ್ರಕರಣವನ್ನು ಖಂಡಿಸಿರುವ ಎಬಿಪಿಪಿ ಕಾರ್ಯಕರ್ತರು ಅಸಹಕಾರ ಚಳುವಳಿ ಆರಂಭಿಸಿದ್ದಾರೆ.
 
ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಸಾವಿರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದ್ರೋಹದ ಘೋಷಣೆ ಕೂಗಿದವರನ್ನು ಹಾಗೂ ಕಾರ್ಯಕ್ರಮ ಆಯೋಜಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಎಬಿವಿಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.
 
ಪ್ರತಿಭಟನೆಯಲ್ಲಿ ಕೈಗೊಳ್ಳುವಂತೆ ವಿದ್ಯಾರ್ಥಿಗಳನ್ನು ಪ್ರೇರೆಪಿಸುತ್ತಿದ್ದ ಆರೋಪದ ಮೇಲೆ ಓರ್ವ ವಿದ್ಯಾರ್ಥಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
 
ನಗರದ ಮಿಲ್ಲರ್ಸ್ ರಸ್ತೆಯಲ್ಲಿರುವ ಥಿಯೋಲಾಜಿಕಲ್ ಕಾಲೇಜಿನಲ್ಲಿ ಆಗಸ್ಟ್ 13ರಂದು ಆಮ್ನೆಸ್ಟಿ ಇಂಡಿಯಾ ಎಂಬ ಸರ್ಕಾರೇತರ ಸಂಸ್ಥೆ 'ಬ್ರೋಕನ್ ಫ್ಯಾಮಿಲೀಸ್' ಎಂಬ ಕಾರ್ಯಕ್ರಮವನ್ನು ನಡೆಸಿತ್ತು. ಈ ಸಂದರ್ಭದಲ್ಲಿ ಭಾರತೀಯ ಸೇನೆ ವಿರುದ್ಧ ಕೆಲವರು ಘೋಷಣೆ ಕೂಗಿದ್ದರು ಎಂಬ ಆರೋಪ ಕೇಳಿ ಬಂದಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ .

Share this Story:

Follow Webdunia kannada

ಮುಂದಿನ ಸುದ್ದಿ

ಕೇಂದ್ರ ಸಚಿವ ವಿ.ಕೆ.ಸಿಂಗ್ ಪತ್ನಿಗೆ ಬ್ಲ್ಯಾಕ್‌ಮೇಲ್, 2ಕೋಟಿ ಬೇಡಿಕೆ