Select Your Language

Notifications

webdunia
webdunia
webdunia
webdunia

ಇಟ್ಟಿಗೆ ತೆಗೆದುಕೊಂಡು ಹೋಗುತ್ತಿದ್ದವ ಭೀಕರವಾಗಿ ಸತ್ತುಬಿಟ್ಟ!

ಇಟ್ಟಿಗೆ ತೆಗೆದುಕೊಂಡು ಹೋಗುತ್ತಿದ್ದವ ಭೀಕರವಾಗಿ ಸತ್ತುಬಿಟ್ಟ!
ತುಮಕೂರು , ಮಂಗಳವಾರ, 11 ಡಿಸೆಂಬರ್ 2018 (14:55 IST)
ಆತ ಎಂದಿನಂತೆ ಇಟ್ಟಿಗೆಗಳನ್ನು ತುಂಬಿಕೊಂಡು ವಾಹನ ಚಲಾಯಿಸುತ್ತಿದ್ದ. ಆದರೆ ಆತನ ಬಾಳಲ್ಲಿ ವಿಧಿ ಆಟವೇ ಬೇರೆಯಾಗಿತ್ತು. ಚಲಿಸುತ್ತಿದ್ದ ವಾಹನದಲ್ಲಿಯೇ ಭೀಕರವಾಗಿ ಸಾವನ್ನಪ್ಪಿದ್ದಾನೆ.

ಟ್ರಾಕ್ಟರ್ ಇಂಜಿನ್ ಮುಗುಚಿ ಚಾಲಕ ಸಾವನ್ನಪ್ಪಿದ್ದಾನೆ. ಮಧುಗಿರಿ ಪಟ್ಟಣದ ಸಮೀಪ ಇರುವ ವಾಲ್ಮೀಕಿ ಬಡಾವಣೆಯಲ್ಲಿ ಅಪಘಾತ ಸಂಭವಿಸಿದೆ. ಇಟ್ಟಿಗೆ ತುಂಬಿಕೊಂಡು ಹೋಗುತ್ತಿದ್ದ  ಟ್ರಾಕ್ಟರ್ ಇಂಜಿನ್ ಮುಗುಚಿ ಈ ಘಟನೆ ನಡೆದಿದೆ.  
ತುಮಕೂರು ಜಿಲ್ಲೆಯ ಪುರವರ ಗ್ರಾಮದ ನಿವಾಸಿ ಟ್ಯಾಕ್ಟರ್ ಚಾಲಕ ರಂಗನಾಥ್ (28) ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಇಂಜಿನ್ ಹಾಗೂ ಟ್ರೈಲರ್ ನಡುವೆ ಸಿಲುಕಿ ಚಾಲಕ ಸ್ಥಳದಲ್ಲಿಯೇ ಸಾವು ಕಂಡಿದ್ದಾನೆ. ಟ್ರಾಕ್ಟರ್ ನಲ್ಲಿದ್ದ  ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿವೆ.

ಅರಳಾಪುರದಿಂದ ಮಧುಗಿರಿಗೆ ಇಟ್ಟಿಗೆ ತುಂಬಿಕೊಂಡು ಬಂದಿದ್ದ ಟ್ರಾಕ್ಟರ್ ಇದಾಗಿತ್ತು. ಟ್ರಾಕ್ಟರ್ ಇಂಜಿನ್ ಹಾಗೂ ಟ್ರೈಲರ್ ನಡುವೆ ಸಿಲುಕಿರುವ ಮೃತದೇಹವನ್ನು ಜೆಸಿಬಿ ಬಳಸಿ ಹೊರತೆಗೆಯಲಾಯಿತು. ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ  ನೀಡಿ ಪರಿಶೀಲನೆ ನಡೆಸಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಆ ಗ್ರಾಮಸ್ಥರು ಮೊಸಳೆ ಸೆರೆಹಿಡಿದದ್ದು ಹೇಗೆ ಗೊತ್ತಾ?