Select Your Language

Notifications

webdunia
webdunia
webdunia
webdunia

ಆ್ಯಂಬುಲೆನ್ಸ್ ನಲ್ಲಿ ರೋಗಿ ಕರೆದೊಯ್ಯುತ್ತಿದ್ದಾಗ ಅಪಘಾತ: ಮೂವರು ಸಾವು

ಆ್ಯಂಬುಲೆನ್ಸ್ ನಲ್ಲಿ ರೋಗಿ ಕರೆದೊಯ್ಯುತ್ತಿದ್ದಾಗ ಅಪಘಾತ: ಮೂವರು ಸಾವು
ಕಾರವಾರ , ಶನಿವಾರ, 27 ಅಕ್ಟೋಬರ್ 2018 (18:29 IST)
ಆ್ಯಂಬುಲೆನ್ಸ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡ ಘಟನೆ ನಡೆದಿದೆ.

ಕುಂದಾಪುರದ ಕೋಟ ಮಣೂರು ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಮಹಿಳೆ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ.

ಮೃತರು ಹಾಗೂ ಗಾಯಾಳುಗಳು ಉತ್ತರ ಕನ್ನಡ ಜಿಲ್ಲೆಯ ಮೂಲದವರು ಎಂದು ಗುರುತಿಸಲಾಗಿದೆ. ಕಾರವಾರದ ಉಲ್ಲಾಸ ತಳೇಕರ್, ಅವರ ಸಂಬಂಧಿಕರಾದ ಅಶೋಕ್ ಎಂಬುವರು ಮೃತರಲ್ಲಿ ಸೇರಿದ್ದಾರೆ.

ಹೃದ್ರೋಗಿಯಾಗಿದ್ದ ಉಲ್ಲಾಸ್ ತಳೇಕರ್ ಅವರನ್ನು ಆ್ಯಂಬುಲೆನ್ಸ್ ನಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರಕ್ಕೆ ಕರೆತರುತ್ತಿದ್ದಾಗ ಲಾರಿ ಹಾಗೂ ಆ್ಯಂಬುಲೆನ್ಸ್ ನಡುವೆ ಢಿಕ್ಕಿ ಸಂಭವಿಸಿ ದುರ್ಘಟನೆ ನಡೆದಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಮೀ ಟೂ ಬಗ್ಗೆ ಸಿಎಂ ಹೇಳಿದ್ದೇನು ಗೊತ್ತಾ?