Select Your Language

Notifications

webdunia
webdunia
webdunia
webdunia

ಅಂಬರೀಶ್ ಅಂತ್ಯಕ್ರಿಯೆ ಮತ್ತಷ್ಟು ವಿಳಂಬ: ಕಾರಣವೇನು ಗೊತ್ತಾ?

ಅಂಬರೀಶ್ ಅಂತ್ಯಕ್ರಿಯೆ ಮತ್ತಷ್ಟು ವಿಳಂಬ: ಕಾರಣವೇನು ಗೊತ್ತಾ?
ಬೆಂಗಳೂರು , ಸೋಮವಾರ, 26 ನವೆಂಬರ್ 2018 (10:28 IST)
ಬೆಂಗಳೂರು: ಮೊನ್ನೆ ನಿಧನರಾದ ಹಿರಿಯ ನಟ ಅಂಬರೀಶ್ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ.

ಆದರೆ ಅಂತ್ಯಕ್ರಿಯೆ ಇಂದು ಮಧ್ಯಾಹ್ನದ ನಂತರ ಅಂದರೆ ಕೊಂಚ ವಿಳಂಬವಾಗಿ ನಡೆಸಲು ಸಿಎಂ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಬೆಳಗಿನ ಅವಧಿಯಲ್ಲಿ ಅಂತಿಮ ಯಾತ್ರೆ ನಡೆಸಿದರೆ ಕಚೇರಿಗೆ ಹೋಗುವವರಿಗೆ ತೊಂದರೆಯಾಗುತ್ತದೆ ಮತ್ತು ಟ್ರಾಫಿಕ್ ಜಾಮ್ ಆಗುತ್ತದೆ ಎಂಬ ಕಾರಣಕ್ಕೆ ಸಿಎಂ ಈ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಅದರಂತೆ ಇಂದು 10.30 ಕ್ಕೆ ಬೆಂಗಳೂರಿನಿಂದ ಹೊರಡಲಿರುವ ಹೆಲಿಕಾಪ್ಟರ್ 11.15 ಕ್ಕೆ ಮಂಡ್ಯಕ್ಕೆ ತಲುಪಿ ಅಂಬರೀಶ್ ಪಾರ್ಥಿವ ಶರೀರವನ್ನು ಹೊತ್ತು ಬೆಂಗಳೂರಿಗೆ ಬರಲಿದೆ. ಬಳಿಕ ಮಧ್ಯಾಹ್ನ 12 ರಿಂದ ಕಂಠೀರವ ಸ್ಟುಡಿಯೋದತ್ತ ಅಂತಿಮ ಯಾತ್ರೆ ನಡೆಯಲಿದೆ. ಮಧ್ಯಾಹ್ನ 3 ರ ನಂತರ ಅಂತಿಮ ವಿಧಿವಿಧಾನಗಳು ನೆರವೇರಲಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಕೊನೆಗೂ ಬೆಂಗಳೂರು ತಲುಪಿದ ಚಾಲೆಂಜಿಂಗ್ ಸ್ಟಾರ್ ದರ್ಶನ್