Select Your Language

Notifications

webdunia
webdunia
webdunia
webdunia

ಬಂಡಾಯ ನಾಯಕರಿಗೆ ಮುಲಾಮು ಹಚ್ಚಲಿದ್ದಾರೆ ಅಮಿತ್ ಶಾ

Amit Shah

Krishnaveni K

ಬೆಂಗಳೂರು , ಮಂಗಳವಾರ, 2 ಏಪ್ರಿಲ್ 2024 (09:29 IST)
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದೇ ಅಸಾಧಾನಗೊಂಡಿರುವ ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ಇಂದು ಮುಲಾಮು ಹಚ್ಚಲಿದ್ದಾರೆ.

ಅಮಿತ್ ಶಾ ಇಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ಅದಕ್ಕೆ ಮೊದಲು ಇಂದು ಬೆಳಿಗ್ಗೆ ಬಿಜೆಪಿ-ಜೆಡಿಎಸ್ ನಾಯಕರ ಜೊತೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಲಿದ್ದಾರೆ. ಇದರ ಜೊತೆಗೆ ರಾಜ್ಯದ ಅಸಮಾಧಾನಿತ ನಾಯಕರ ಜೊತೆ ಸಭೆ ನಡೆಸಲಿದ್ದಾರೆ.

ವಿಶೇಷವಾಗಿ ರೇಣುಕಾಚಾರ್ಯ ಮತ್ತು ತಂಡಕ್ಕೆ ಬುಲಾವ್ ನೀಡಲಾಗಿದೆ. ಟಿಕೆಟ್ ಸಿಗದ ಹಿನ್ನಲೆಯಲ್ಲಿ ರೇಣುಕಾಚಾರ್ಯ ಮತ್ತು ಬಳಗ ರಾಜ್ಯ ನಾಯಕರ ಮೇಲೆ ಮುನಿಸಿಕೊಂಡಿದ್ದಾರೆ. ಕೆಲವು ಜಿಲ್ಲೆಗಳಲ್ಲಿ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಅಸಮಾಧಾನ ಮನೆ ಮಾಡಿದೆ.

ಅದರಲ್ಲೂ ಯಡಿಯೂರಪ್ಪ ಮತ್ತು ಮಕ್ಕಳ ನಾಯಕತ್ವದ ಮೇಲೆ ಕೆಲವರಿಗೆ ಅಸಮಾಧಾನವಿದೆ. ಈಗಾಗಲೇ ಅಮಿತ್ ಶಾ ಆಗಮನಕ್ಕೂ ಮುನ್ನವೇ ವಿಜಯೇಂದ್ರ 3 ಕ್ಷೇತ್ರಗಳಲ್ಲಿ ಎದ್ದಿದ್ದ ಬಂಡಾಯ ಶಮನಗೊಳಿಸಿದ್ದಾರೆ. ಉಳಿದಂತೆ ಇಂದು ಅಮಿತ್ ಶಾ ಸಭೆ ನಡೆಸಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಇಂದು ಅಮಿತ್ ಶಾ ಭರ್ಜರಿ ಪ್ರಚಾರ