Select Your Language

Notifications

webdunia
webdunia
webdunia
webdunia

ಆಪ್​ ಕಾರ್ಯಕರ್ತನಿಗೆ ಕಪಾಳ ಮೋಕ್ಷ

ಆಪ್​ ಕಾರ್ಯಕರ್ತನಿಗೆ ಕಪಾಳ ಮೋಕ್ಷ
ಬೆಳಗಾವಿ , ಮಂಗಳವಾರ, 11 ಸೆಪ್ಟಂಬರ್ 2018 (15:24 IST)
ಪೆಟ್ರೋಲ್​, ಡೀಸೆಲ್​ ಬೆಲೆ ಏರಿಕೆ ವಿರೋಧಿಸಿ ಕರೆ ನೀಡಿದ್ದ ಭಾರತ್​ ಬಂದ್​ ವೇಳೆ ಆಮ್ ಆದ್ಮಿ ಕಾರ್ಯಕರ್ತರೊಬ್ಬರಿಗೆ ಕಪಾಳ ಮೋಕ್ಷ ಮಾಡಿದ ಘಟನೆ ನಡೆದಿದೆ.

ಭಾರತ ಬಂದ್​ಗೆ ಆಮ್​ ಆದ್ಮಿ ಪಾರ್ಟಿ ಕೂಡ ಬೆಂಬಲ ವ್ಯಕ್ತಪಡಿಸಿತ್ತು. ಹೀಗಾಗಿ ಆಪ್​ ಮುಖಂಡರು ಹಾಗೂ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಆಪ್​ ಮುಖಂಡರೊಬ್ಬರು ಆಪ್​ ಕಾರ್ಯಕರ್ತರೊಬ್ಬರಿಗೆ ಕಪಾಳ ಮೋಕ್ಷ ಮಾಡಿದ್ದಾರೆ.

ಇದಕ್ಕೆ ಕಾರಣ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಕಾರ್ಯಕರ್ತ ಪೆಟ್ರೋಲ್​ ಬೆಲೆ ಇಳಿಕೆ ಮಾಡಬೇಕು ಎಂದು ಘೋಷಣೆ ಕೂಗುವ ಬದಲು, ಪೆಟ್ರೋಲ್ ಬೆಲೆ ಏರಿಕೆ ಮಾಡಬೇಕು ಎಂದು ಕೂಗಿದ್ದರು. ಇದರಿಂದ ಕೋಪಗೊಂಡ ಆಪ್​ ಮುಖಂಡ ಸ್ಥಳದಲ್ಲೇ ಕಾರ್ಯಕರ್ತನ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ. ಆಪ್​ ಮುಖಂಡನ ಈ ನಡೆಗೆ ಇದೀಗ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ.



 

Share this Story:

Follow Webdunia kannada

ಮುಂದಿನ ಸುದ್ದಿ

ಒಂಭತ್ತು ತಿಂಗಳ ಮಗುವಿನ ಪ್ರಾಣವನ್ನು ಬಲಿತೆಗೆದುಕೊಂಡ ಸುಣ್ಣದ ಡಬ್ಬಿ