Select Your Language

Notifications

webdunia
webdunia
webdunia
webdunia

ಜೈಲಿಗೆ ಹೋಗಿ ಬಂದವರು ಸಿಎಂ ಆಗುವ ಕನಸು ಕಾಣುತ್ತಿದ್ದಾರೆ: ಯಡ್ಡಿಗೆ ಸಿದ್ದು ಟಾಂಗ್

ಜೈಲಿಗೆ ಹೋಗಿ ಬಂದವರು ಸಿಎಂ ಆಗುವ ಕನಸು ಕಾಣುತ್ತಿದ್ದಾರೆ: ಯಡ್ಡಿಗೆ ಸಿದ್ದು ಟಾಂಗ್
ಕಲಬುರ್ಗಿ , ಸೋಮವಾರ, 26 ಡಿಸೆಂಬರ್ 2016 (10:55 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150 ಸೀಟುಗಳನ್ನು ಗೆಲುವ ಮೂಲಕ ರಾಜ್ಯದಲ್ಲಿ ಅಧಿಕಾರ ಸ್ಥಾಪಿಸುತ್ತೇವೆ ಎಂದು ಹೇಳಿಕೊಂಡು ತಿರುಗುತ್ತಿರುವ ಬಿಜೆಪಿ ನಾಯಕರು, ರಾಜ್ಯದಲ್ಲಿ ತಮ್ಮ ಸರಕಾರ ಅಧಿಕಾರಕ್ಕೆ ಬಂದೆಬಿಟ್ಟಿದೆ ಎಂದು ಹಗಲು ಕನಸು ಕಾಣುತ್ತಿದ್ದಾರೆ. ಜೈಲಿಗೆ ಹೋಗಿ ಬಂದವರು ಮುಖ್ಯಮಂತ್ರಿ ಆಗುವ ಕನಸ್ಸಿನಲ್ಲಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪರೋಕ್ಷವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಟಾಂಗ್ ನೀಡಿದ್ದಾರೆ.
ಕಲಬುರ್ಗಿಯಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ 80 ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸುಳ್ಳು ಹೇಳುವುದರಲ್ಲಿ ಬಿಜೆಪಿ ನಾಯಕರು ನಿಸ್ಸಿಮರು. ಕೆಲಸಕ್ಕೆ ಬಾರದ ವಿಷಯ ತೆಗೆದುಕೊಂಡು ಸುಳ್ಳು ಹೇಳುತ್ತಾ ತಿರುಗುತ್ತಾರೆ. ಮುಂದೆ ಅದೇ ಸುಳ್ಳನ್ನು ನೂರು ಸಾರಿ ಹೇಳಿ ಸತ್ಯ ಅನುವಂತೆ ಬಿಂಬಿಸುತ್ತಾರೆ ಎಂದು ಆರೋಪಿಸಿದರು. 
 
ಸುಳ್ಳು ಹೇಳಿ ಚಾರಿತ್ರ್ಯ ವಧೆ ಮಾಡಿಕೊಂಡು ತಿರುಗುವ ಬಿಜೆಪಿಗೆ ಆರ್‌ಎಸ್‌ಎಸ್ ಬೆನ್ನಿಗೆ ನಿಂತು ಸಹಕಾರ ನೀಡುತ್ತಿದೆ ಎಂದು ದೂರಿದರು.  

2018ರಲ್ಲಿಯೂ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಜಯಭೇರಿಯಾಗಲಿದೆ. ಯಾವುದಕ್ಕೂ ಅಳುಕದೆ ಬಿಜೆಪಿಯವರ ಬಣ್ಣ ಬಯಲು ಮಾಡಲು ಕಾಂಗ್ರೆಸ್ ನಾಯಕರು ಸನ್ನದ್ಧರಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಎಲ್ಲದಕ್ಕೂ ಪ್ರಧಾನಿಯನ್ನು ದೂರುವುದು ಸರಿಯಲ್ಲ: ಪ್ರಹ್ಲಾದ ಜೋಶಿ