Select Your Language

Notifications

webdunia
webdunia
webdunia
webdunia

ಬಿಜೆಪಿ ನಾಯಕರಿಂದ ಕೇಂದ್ರ ಸರ್ಕಾರದ ಅಧಿಕಾರ ದುರ್ಬಳಕೆ- ದಿನೇಶ್ ಗುಂಡೂರಾವ್

ಬಿಜೆಪಿ ನಾಯಕರಿಂದ ಕೇಂದ್ರ ಸರ್ಕಾರದ ಅಧಿಕಾರ ದುರ್ಬಳಕೆ- ದಿನೇಶ್ ಗುಂಡೂರಾವ್
ಬೆಂಗಳೂರು , ಭಾನುವಾರ, 23 ಸೆಪ್ಟಂಬರ್ 2018 (06:53 IST)
ಬೆಂಗಳೂರು : ರಾಜ್ಯ ಬಿಜೆಪಿ ನಾಯಕರು ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ  ಹೆಸರನ್ನು ಬಳಸಿ, ಕೇಂದ್ರ ಸರ್ಕಾರದ ಅಧಿಕಾರವನ್ನ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕೆಪಿಪಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಂಗಳೂರಿನಲ್ಲಿ ಹಣ ಸಂಗ್ರಹಿಸಿ, ಶಾಸಕರನ್ನು ಖರೀದಿಸಲು ಮುಂದಾಗಿದ್ದಾರೆ, ಕೇಂದ್ರ ಸರ್ಕಾರದ ಅಧಿಕಾರವನ್ನು ರಾಜ್ಯ ಬಿಜೆಪಿ ನಾಯಕರು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.
‘ಬಿಜೆಪಿಯವರು ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಲೇವಾದೇವಿಗಳಿಂದ ಹಣ ಸಂಗ್ರಹಿಸುತ್ತಿದ್ದಾರೆ. ಇದು ಬಹಿರಂಗವಾಗಿಯೇ ನಡೆಯುತ್ತಿದ್ದರೂ ಐಟಿ ಅಧಿಕಾರಿಗಳು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ' ಎಂದು ಅವರು ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸಮ್ಮಿಶ್ರ ಸರ್ಕಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯ ಮೇಲೆ ನಿಂತಿದೆ-ಕೆ.ವೈ.ನಂಜೇಗೌಡ