Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಗೆ ಬರಲು ಬಿಜೆಪಿ ಶಾಸಕರು ಕ್ಯೂನಲ್ಲಿದ್ದಾರಂತೆ!

ಕಾಂಗ್ರೆಸ್ ಗೆ ಬರಲು ಬಿಜೆಪಿ ಶಾಸಕರು ಕ್ಯೂನಲ್ಲಿದ್ದಾರಂತೆ!
ಬೆಂಗಳೂರು , ಮಂಗಳವಾರ, 28 ಆಗಸ್ಟ್ 2018 (10:55 IST)
ಬೆಂಗಳೂರು: ಬಿಜೆಪಿಯ ಕೆಲವು ಶಾಸಕರು ಕಾಂಗ್ರೆಸ್ ಗೆ ಬರಲು ತುದಿಗಾಲಲ್ಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿಕೊಂಡಿದ್ದಾರೆ.

ಕಾಂಗ್ರೆಸ್ ಕೆಲವು ಶಾಸಕರು ಬಿಜೆಪಿ ಜತೆ ಕೈ ಜೋಡಿಸಲಿದ್ದಾರೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಯಾಗಿ ಈಶ್ವರ ಖಂಡ್ರೆ ಈ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ನ ಶಾಸಕರು ಯಾರೂ ಬಿಜೆಪಿಗೆ ಹೋಗುತ್ತಿಲ್ಲ ಎಂದೂ ಅವರು ಸ್ಪಷ್ಟನೆ ನೀಡಿದ್ದಾರೆ.

ಇನ್ನು, ಸಿದ್ದರಾಮಯ್ಯ ಮೈತ್ರಿ ಸರ್ಕಾರದ ವಿರುದ್ಧ ಬಂಡಾಯವೆದ್ದು, ವಿದೇಶಕ್ಕೆ ತೆರಳುತ್ತಿದ್ದಾರೆ ಎಂಬ ಆಪಾದನೆಗಳನ್ನು ತಳ್ಳಿ ಹಾಕಿದ ಅವರು ಸಿದ್ದರಾಮಯ್ಯ ಯಾವತ್ತೂ ವಿದೇಶಕ್ಕೆ ಹೋಗಲ್ಲ. ಈಗ ಹೋಗಿ 8-10 ದಿನದಲ್ಲಿ ವಾಪಸ್ ಬರ್ತಾರೆ ಎಂದಿದ್ದಾರೆ. ಸಮನ್ವಯ ಸಮಿತಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಸೇರ್ಪಡೆಗೆ ಸಿದ್ದರಾಮಯ್ಯ ಬಣದ ವಿರೋಧವಿದೆ ಎಂಬ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು ಇದನ್ನು ಪಕ್ಷ ನಿರ್ಧರಿಸುತ್ತದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಅಪಾಯಕಾರಿ ಡೆಡ್ಲಿ ಮೊಮೊ ಗೇಮ್ ಬಗ್ಗೆ ಜಾಗೃತಿ ಮೂಡಿಸಲು ಹೊರಟ ಸೈಬರ್ ಕ್ರೈಂ ಪೊಲೀಸರು