Select Your Language

Notifications

webdunia
webdunia
webdunia
webdunia

ರಾಜಧಾನಿಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ನಾಯಕ

ರಾಜಧಾನಿಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ನಾಯಕ
ಬೆಂಗಳೂರು , ಮಂಗಳವಾರ, 5 ಫೆಬ್ರವರಿ 2019 (18:02 IST)
ಆಪರೇಷನ್ ಕಮಲಕ್ಕೆ ಬಿಜೆಪಿ ಯತ್ನಿಸುತ್ತಿದೆ ಎಂಬ ಸುದ್ದಿಗಳ ನಡುವೆಯೇ ಬಿಜೆಪಿ ರಾಷ್ಟ್ರೀಯ ನಾಯಕ ರಾಜಧಾನಿಗೆ ಆಗಮಿಸಿರುವುದು ಕುತೂಹಲ ಮೂಡಿಸಿದೆ.

ಬೆಂಗಳೂರಿಗೆ ಬಿ.ಜೆ.ಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ರಾಮ್ ಲಾಲ್ ಆಗಮಿಸಿದ್ದಾರೆ.

ದೆಹಲಿಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಪಕ್ಷದ ರಾಜ್ಯ ನಾಯಕರು ಬರಮಾಡಿಕೊಂಡರು.
ಮಾಧ್ಯಮ ದವರ ಜೊತೆ ಮಾತನಾಡಲು ನಿರಾಕರಿಸಿದ ರಾಮಲಾಲ್, ಬಿಜೆಪಿ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದರು.

ರಾಜ್ಯ ಬಿ.ಜೆ.ಪಿ ನಾಯಕರ ಜೊತೆ ಮಹತ್ವದ ಸಭೆ ಏರ್ಪಡಿಸಲಾಗಿದೆ. ರಾಮ್ ಲಾಲ್ ಗೆ ಎಂಎಲ್ ಸಿ ನಾರಾಯಣ ಸ್ವಾಮಿ ಸಾಥ್ ನೀಡಿದರು. ರಾಮಲಾಲ್ ಬೆಂಗಳೂರಿಗೆ ಆಗಮಿಸಿರುವುದು ಮಹತ್ವ ಪಡೆದುಕೊಂಡಿದೆ.




Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಪಿಎಂ ಕ್ಷೇತ್ರದಲ್ಲಿ ಅನಿಷ್ಟ ಪದ್ಧತಿ ಜೀವಂತ!