Select Your Language

Notifications

webdunia
webdunia
webdunia
webdunia

ಬಿಜೆಪಿಗೆ ಬಿಗ್ ಶಾಕ್; ಪಕ್ಷಕ್ಕೆ ಗುಡ್ ಬೈ ಹೇಳಲಿದ್ದಾರಂತೆ ಈ ನಾಯಕರು

ಬಿಜೆಪಿಗೆ ಬಿಗ್ ಶಾಕ್; ಪಕ್ಷಕ್ಕೆ ಗುಡ್ ಬೈ ಹೇಳಲಿದ್ದಾರಂತೆ ಈ  ನಾಯಕರು
ಬೆಂಗಳೂರು , ಶನಿವಾರ, 16 ಮಾರ್ಚ್ 2019 (13:13 IST)
ಬೆಂಗಳೂರು : ಲೋಕಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿರುವ ಬೆನ್ನಲೇ ಇದೀಗ ಮಾಜಿ ಎಂಎಲ್ ಸಿ ಕೆ.ಬಿ. ಶಾಣಪ್ಪ ಅವರು  ಬಿಜೆಪಿ ತೊರೆಯಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಉಮೇಶ್ ಜಾಧವ್ ಟಿಕೆಟ್ ನೀಡೋ ವಿಚಾರಕ್ಕೆ ಸಂಬಂಧಿಸಿದಂತೆ  ಟಿಕೆಟ್ ನೀಡಿಕೆ ವಿಚಾರದಲ್ಲಿ ಸಂಪರ್ಕಿಸದ್ದಕ್ಕೆ ಅವರು ಬೇಸರಗೊಂಡಿದ್ದರು. ಬಿಜೆಪಿ ನಾಯಕರ ಈ ವರ್ತನೆಯಿಂದ ಬೇಸತ್ತು ಇದೀಗ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.


ಹಾಗೇ ರಾಜ್ಯ ಬಿಜೆಪಿ ಉಪಾಧ್ಯಕ್ಷ, ಮಾಜಿ ಸಚಿವ ಬಾಬುರಾವ್ ಚೌಹ್ಹಾಣ್ ಮತ್ತು ಗುರುಮಠಕಲ್ ಬಿಜೆಪಿ ಮುಖಂಡ ಶ್ಯಾಮರಾವ್ ಪ್ಯಾಟಿ ಬಿಜೆಪಿಗೆ ಗುಡ್ ಬೈ ಹೇಳಲು ನಿರ್ಧರಿಸಿದ್ದಾರೆ ಎನ್ನಲಾಗಿದ್ದು, ಮಾರ್ಚ್ 18 ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಬಾಬುರಾವ್ ಚೌಹ್ಹಾಣ್ ಹಾಗೂ ಶ್ಯಾಮರಾವ್ ಪ್ಯಾಟಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಕಾಂಗ್ರೆಸ್ ಗೆ ಗುಡ್ ಬೈ ಹೇಳಲಿರುವ ಮಾಜಿ ಸಚಿವ ಎ.ಮಂಜು