Select Your Language

Notifications

webdunia
webdunia
webdunia
webdunia

ಭಾವಿ ಮುಖ್ಯಮಂತ್ರಿ ಹೇಳಿಕೆ ಸಮರ್ಥನೆ ಮಾಡಿಕೊಂಡ ಬಿಎಸ್ವೈ

ಭಾವಿ ಮುಖ್ಯಮಂತ್ರಿ ಹೇಳಿಕೆ ಸಮರ್ಥನೆ ಮಾಡಿಕೊಂಡ ಬಿಎಸ್ವೈ
ಕಲಬುರಗಿ , ಭಾನುವಾರ, 11 ನವೆಂಬರ್ 2018 (18:38 IST)
ಪದೇ ಪದೇ ಭಾವಿ ಮುಖ್ಯಮಂತ್ರಿ ಎಂದು ಕರೆಯಬೇಡಿ ಎಂಬ ಹೇಳಿಕೆ ಹಿನ್ನಲೆಯಲ್ಲಿ ತಮ್ಮ ಹೇಳಿಕೆಯನ್ನು  ಬಿಜೆಪಿ ರಾಜ್ಯಾಧ್ಯಕ್ಷ ಸಮರ್ಥನೆ ಮಾಡಿಕೊಂಡಿದ್ದಾರೆ.

ಹೋದಲ್ಲೆಲ್ಲಾ ಸಭೆಗಳಲ್ಲಿ ಭಾವಿ ಮುಖ್ಯಮಂತ್ರಿ ಎಂದು ಹೇಳಬೇಡಿ ಎಂದಿದ್ದೇನೆ. ಹಾಗೆಂದ ಮಾತ್ರಕ್ಕೆ ಮುಖ್ಯಮಂತ್ರಿ ಆಗಬೇಕೆಂಬ ಆಸೆಯಿಂದ ದೂರ ಸರಿದಿದ್ದೇನೆ ಎಂದಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಕಾಂಗ್ರೆಸ್ – ಜೆಡಿಎಸ್ ನವರು ಅವರಾಗಿಯೇ ಬಡಿದಾಡಿಕೊಂಡು ಸತ್ತರೆ ನಾವು ಖಂಡಿತಾ ಸರ್ಕಾರ ರಚಿಸುತ್ತೇವೆ. ಅಲ್ಲಿಯವರೆಗೂ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುತ್ತೇವೆ. ಸಮರ್ಥ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಕಲಬುರ್ಗಿಗೆ ಭೇಟಿ ನೀಡಿದ ವೇಳೆ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಕಿಡಿಗೇಡಿಗಳಿಂದ ಆಟೋ ರಿಕ್ಷಾಗೆ ಬೆಂಕಿ