Select Your Language

Notifications

webdunia
webdunia
webdunia
webdunia

ಏರೋ ಇಂಡಿಯಾ ಸ್ಥಳಾಂತರವಾಗುತ್ತೆ ಎಂದವರೆಲ್ಲಾ ಈಗ ಕ್ಷಮೆ ಯಾಚಿಸಲಿ: ಬಿಎಸ್ ವೈ

ಏರೋ ಇಂಡಿಯಾ ಸ್ಥಳಾಂತರವಾಗುತ್ತೆ ಎಂದವರೆಲ್ಲಾ ಈಗ ಕ್ಷಮೆ ಯಾಚಿಸಲಿ: ಬಿಎಸ್ ವೈ
ಬೆಂಗಳೂರು , ಸೋಮವಾರ, 10 ಸೆಪ್ಟಂಬರ್ 2018 (09:15 IST)
ಬೆಂಗಳೂರು: ಈ ಬಾರಿ ಏರ್ ಶೋ ಬೆಂಗಳೂರಿನಲ್ಲಿ ನಡೆಯದೇ ಉತ್ತರ ಪ್ರದೇಶಕ್ಕೆ ಸ್ಥಳಾಂತರವಾಗಲಿದೆ ಎಂಬ ಸುದ್ದಿ ಹಬ್ಬುತ್ತಿದ್ದಂತೇ ಕಾಂಗ್ರೆಸ್-ಜೆಡಿಎಸ್ ಬಿಜೆಪಿ ವಿರುದ್ಧ ಹರಿಹಾಯ್ದಿದ್ದರು.

ಇದೀಗ ಕೇಂದ್ರ ಸರ್ಕಾರವೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಏರೋ ಇಂಡಿಯಾ ಶೋ ಯಾವುದೇ ಕಾರಣಕ್ಕೂ ಬೆಂಗಳೂರಿನಿಂದ ಸ್ಥಳಾಂತರವಾಗದು ಎಂದಿದೆ. ಹೀಗಾಗಿ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆಡಳಿತಾರೂಢ ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

‘ಎಂದಿನಂತೆ ಈ ಬಾರಿಯೂ ಏರೋ ಇಂಡಿಯಾ ಶೋವನ್ನು ಫೆ.20 ರಂದು ಬೆಂಗಳೂರಿನಲ್ಲೇ ನಡೆಸುವುದಾಗಿ ರಕ್ಷಣಾ ಇಲಾಖೆ ಸ್ಪಷ್ಟಪಡಿಸಿದೆ. ಕೇಂದ್ರ ಸರ್ಕಾರವನ್ನು ಅವಹೇಳನ ಮಾಡುವ ದುರುದ್ದೇಶದಿಂದ ಏರ್ ಶೋ ಸ್ಥಳಾಂತರವಾಗಲಿದೆ ಎಂದು ಅಪಪ್ರಚಾರ ಮಾಡಿ ಕನ್ನಡಿಗರಲ್ಲಿ ಆತಂಕ ಸೃಷ್ಟಿಸಿದ ಕಾಂಗ್ರೆಸ್-ಜೆಡಿಎಸ್ ಈಗ ಕ್ಷಮೆ ಯಾಚಿಸಲಿ’ ಎಂದು ಬಿಎಸ್ ವೈ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಕೈಲಾಸ ಯಾತ್ರೆ ಬಳಿಕ ರಾಹುಲ್ ಗಾಂಧಿ ಮುಂದಿನ ಭೇಟಿ ಎಲ್ಲಿಗೆ ಗೊತ್ತಾ?