Select Your Language

Notifications

webdunia
webdunia
webdunia
webdunia

ಕನ್ನಡಪರ ಸಂಘಟನೆಗಳಿಂದ ದೊಡ್ಡಬಳ್ಳಾಪುರ ರೈಲು ನಿಲ್ದಾಣಕ್ಕೆ ಮುತ್ತಿಗೆ ಯತ್ನ

ಕನ್ನಡಪರ ಸಂಘಟನೆಗಳಿಂದ ದೊಡ್ಡಬಳ್ಳಾಪುರ ರೈಲು ನಿಲ್ದಾಣಕ್ಕೆ ಮುತ್ತಿಗೆ ಯತ್ನ
ದೊಡ್ಡಬಳ್ಳಾಪುರ , ಗುರುವಾರ, 15 ಸೆಪ್ಟಂಬರ್ 2016 (11:21 IST)
ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಇಂದು ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು ರಾಜ್ಯಾದ್ಯಂತ ರೈಲು ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ರೈಲು ನಿಲ್ದಾಣಕ್ಕೆ ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸುದ್ದಾಗ ಪೊಲೀಸರು ತಡೆದರು. 
ಮುಂಜಾನೆ 9 ಗಂಟೆಗೆ ನೂರಾರು ಕಾರ್ಯಕರ್ತರು ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪ್ರತಿಭಟನಾನಿರತರನ್ನು ಪೊಲೀಸರು ತಡೆದ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. 
 
ಪೊಲೀಸರು ವಿರುದ್ಧದ ಹಿನ್ನೆಲೆಯಲ್ಲಿ ರೈಲು ನಿಲ್ದಾಣದ ಪಕ್ಕದಲ್ಲಿಯೇ ಪ್ರತಿಭಟನೆ ನಡೆಸಿದ ಕನ್ನಡಪರ ಸಂಘಟನೆಯ ನೂರಾರು ಕಾರ್ಯಕರ್ತರು ರಾಜ್ಯ ಹಾಗೂ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡಪರ ಸಂಘಟನೆಯಿಂದ ರೈಲು ಬಂದ್ ಕರೆ: ನಗರದಾದ್ಯಂತ ಪೊಲೀಸ್ ಕಟ್ಟೆಚ್ಚರ