Select Your Language

Notifications

webdunia
webdunia
webdunia
webdunia

ಪರೇಶ್‍ ಸಾವಿನ ಪ್ರಕರಣ ಸಿಬಿಐ ತನಿಖೆಗೆ- ರಾಮಲಿಂಗಾರೆಡ್ಡಿ

ಪರೇಶ್‍ ಸಾವಿನ ಪ್ರಕರಣ ಸಿಬಿಐ ತನಿಖೆಗೆ- ರಾಮಲಿಂಗಾರೆಡ್ಡಿ
ಬೆಂಗಳೂರು , ಬುಧವಾರ, 13 ಡಿಸೆಂಬರ್ 2017 (19:46 IST)
ಹಿಂದೂ ಸಂಘಟನೆಯ ಕಾರ್ಯಕರ್ತ ಪರೇಶ್ ಮೇಸ್ತಾ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
 
ಪರಪ್ಪನ ಅಗ್ರಹಾರ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಸಭೆ ಚುನಾವಣೆಯನ್ನು ಮುಂದಿಟ್ಟುಕೊಂಡು ಅನಗತ್ಯ ಆರೋಪಗಳನ್ನು ಮಾಡುತ್ತಿದೆ. ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಪ್ರಕರಣದಲ್ಲೂ ಬಿಜೆಪಿ ಹೀಗೆ ಮಾಡಿತ್ತು. ಕೊನೆಗೆ ಸಿಬಿಐ ಸಹ ಕ್ಲೀನ್ ಚಿಟ್ ನೀಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಪರೇಶ್ ಮೇಸ್ತಾ ಮರಣೋತ್ತರ ಪರೀಕ್ಷಾ ವರದಿ ಬರಲು ಇನ್ನು 8ರಿಂದ 10 ದಿನ ಬೇಕು. ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ಏನು ಎಂಬುದು ತಿಳಿಯುತ್ತದೆ. ಪರಮೇಶ್ ಮೇಸ್ತಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ್ದು, ಪ್ರಕರಣವನ್ನು ಸಿಬಿಐಗೆ ವಹಿಸಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.
 
ಬಿಜೆಪಿ ನಾಯಕರ ಒತ್ತಾಯಕ್ಕೆ ಮಣಿದು ನಾವು ಪ್ರಕರಣವನ್ನು ಸಿಬಿಐಗೆ ವಹಿಸುತ್ತಿಲ್ಲ. ಮೇಸ್ತಾ ಅವರ ಕುಟುಂಬದ ಒತ್ತಾಸೆಯಂತೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗುವುದು ಎಂದು ಹೇಳಿದ್ದಾರೆ.
 
ಪರೇಶ್ ಸಾವಿನ ಪ್ರಕರಣ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಆರೋಪ, ಪ್ರತ್ಯಾರೋಪಕ್ಕೆ ಕಾರಣವಾಗಿತ್ತು. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಖರ್ಗೆ ವಿರುದ್ದ ಪಿತೂರಿ ನಡೆಸಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ- ದೇವೇಗೌಡ