Select Your Language

Notifications

webdunia
webdunia
webdunia
webdunia

ಬಿಜೆಪಿಗೆ ಮಾಡಿದ ಈ ದ್ರೋಹದಿಂದ ಚಂದ್ರಶೇಖರ್ ರಾಜಕೀಯ ಭವಿಷ್ಯ ಕೊನೆಗೊಳ್ಳುತ್ತದೆ ಕಿಡಿಕಾರಿದ ಸದಾನಂದಗೌಡ

ಬಿಜೆಪಿಗೆ ಮಾಡಿದ ಈ ದ್ರೋಹದಿಂದ ಚಂದ್ರಶೇಖರ್ ರಾಜಕೀಯ ಭವಿಷ್ಯ ಕೊನೆಗೊಳ್ಳುತ್ತದೆ ಕಿಡಿಕಾರಿದ ಸದಾನಂದಗೌಡ
ಬೆಂಗಳೂರು , ಗುರುವಾರ, 1 ನವೆಂಬರ್ 2018 (14:27 IST)
ಬೆಂಗಳೂರು : ರಾಮನಗರದ ಬಿಜೆಪಿ ಅಭ್ಯರ್ಥಿ ಎಲ್. ಚಂದ್ರಶೇಖರ್ ಅವರು ಚುನಾವಣಾ ಕಣದಿಂದ ಹಿಂದೆ ಸರಿದು, ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗುವುದರ  ಬಗ್ಗೆ ಇದೀಗ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಚಂದ್ರಶೇಖರ್ ಅವರನ್ನು ರಾಮನಗರ ಜನ ಮತ್ತು ದೇವರು ಕ್ಷಮಿಸುವುದಿಲ್ಲ ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ.


‘ಕಾಂಗ್ರೆಸ್ ನಲ್ಲಿ ಇದ್ದು ಅಲ್ಲಿನ ನಡವಳಿಕೆಗೆ ಬೇಸತ್ತು ಬಿಜೆಪಿ ಪಕ್ಷಕ್ಕೆ ಚಂದ್ರಶೇಖರ್ ಸೇರಿದ್ದರು. ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ವ್ಯಕ್ತಪಡಿಸಿದ್ದರಿಂದ ಅವರಿಗೆ ಟಿಕೆಟ್ ನೀಡಿ ಲೋಕಸಭಾ ಉಪಚುನಾವಣೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಯಿತು. ಆದರೆ ಈಗ ಅವರು ಬಿಜೆಪಿಗೆ ದ್ರೋಹ ಮಾಡಿ ಪಲಾಯನ ಮಾಡಿದ್ದಾರೆ. ಅವರನ್ನು ರಾಮನಗರ ಜನ ಮತ್ತು ದೇವರು ಕ್ಷಮಿಸುವುದಿಲ್ಲ ಇದರಿಂದ ಚಂದ್ರಶೇಖರ್ ಅವರ ರಾಜಕೀಯ ಭವಿಷ್ಯ ಕೊನೆಗೊಳ್ಳುತ್ತದೆ ಎಂದು ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

Share this Story:

Follow Webdunia kannada

ಮುಂದಿನ ಸುದ್ದಿ

ಚುನಾವಣಾ ಕಣದಿಂದ ಹಿಂದೆ ಸರಿದ ಚಂದ್ರಶೇಖರ್; ಯಡಿಯೂರಪ್ಪ ವಿರುದ್ಧ ಹೈಕಮಾಂಡ್‍ಗೆ ದೂರು ದಾಖಲು