Select Your Language

Notifications

webdunia
webdunia
webdunia
webdunia

ಸಿಎಂ ಕುಮಾರಸ್ವಾಮಿ ವಿಶ್ರಾಂತಿ ಹಿಂದೆ ಬೇರೆಯದೇ ಲೆಕ್ಕಾಚಾರ?!

ಸಿಎಂ ಕುಮಾರಸ್ವಾಮಿ ವಿಶ್ರಾಂತಿ ಹಿಂದೆ ಬೇರೆಯದೇ ಲೆಕ್ಕಾಚಾರ?!
ಬೆಂಗಳೂರು , ಶುಕ್ರವಾರ, 9 ನವೆಂಬರ್ 2018 (11:14 IST)
ಬೆಂಗಳೂರು: ಸಿಎಂ ಕುಮಾರಸ್ವಾಮಿ ಇಂದಿನಿಂದ ಮೂರು ದಿನಗಳ ಕಾಲ ವಿಶ್ರಾಂತಿಗೆ ತೆರಳಿದ್ದು, ಇದರ ಹಿಂದೆ ಬೇರೆಯದೇ ಲೆಕ್ಕಾಚಾರಗಳಿವೆಯೇ ಎಂಬ ಅನುಮಾನ ಮೂಡಿದೆ.

ನಾಳೆ ವಿವಾದಿತ ಟಿಪ್ಪು ಜಯಂತಿ ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ನಡೆಸಲು ನವಂಬರ್ 3 ರಂದೇ ನಿರ್ಧರಿಸಲಾಗಿತ್ತು. ಆದರೆ ಈ ಕಾರ್ಯಕ್ರಮದಲ್ಲಿ ನನ್ನ ಹೆಸರು ಹಾಕಬೇಡಿ ಎಂದು ಸಿಎಂ ಮೊದಲೇ ಸೂಚಿಸಿದ್ದರು.

ಟಿಪ್ಪು ಜಯಂತಿ ವಿವಾದಗಳು, ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರೆ ಅಧಿಕಾರ ಹೋಗುತ್ತದೆ ಎಂಬ ನಂಬಿಕೆಗಳಿಂದಾಗಿ ಸಿಎಂ ಈ ಕಾರ್ಯಕ್ರಮದಿಂದ ದೂರ ಉಳಿದಿದ್ದಾರಾ ಎಂಬ ಊಹಾಪೋಹಗಳು ಎದ್ದಿವೆ. ಹೀಗಾಗಿ ಮುಖ್ಯಮಂತ್ರಿಗಳು ಕಾರ್ಯಕ್ರಮದಿಂದ ದೂರ ಉಳಿದರೆ ಮತ್ತೊಂದು ವಿವಾದವಾಗುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ದೀಪಾವಳಿ ಶಾಪಿಂಗ್ ಕರೆದೊಯ್ಯಲು ನಿರಾಕರಿಸಿದ್ದಕ್ಕೆ ಕೊಲೆ