Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯ ಜಾತಿಗಳ ನಡುವೆ ಬೆಂಕಿ ಹಚ್ಚುತ್ತಿದ್ದಾರೆ, ಈಗ ಯಶಸ್ವಿಯಾಗಿದ್ದಾರೆ; ಈಶ್ವರಪ್ಪ

ಸಿಎಂ ಸಿದ್ದರಾಮಯ್ಯ ಜಾತಿಗಳ ನಡುವೆ ಬೆಂಕಿ ಹಚ್ಚುತ್ತಿದ್ದಾರೆ, ಈಗ ಯಶಸ್ವಿಯಾಗಿದ್ದಾರೆ; ಈಶ್ವರಪ್ಪ
ಶಿವಮೊಗ್ಗ , ಮಂಗಳವಾರ, 20 ಮಾರ್ಚ್ 2018 (14:41 IST)
ಶಿವಮೊಗ್ಗ : ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಜಾತಿಗಳ ನಡುವೆ ಬೆಂಕಿ ಹಚ್ಚುತ್ತಿದ್ದಾರೆ. ಈಗ ಯಶಸ್ವಿಯಾಗಿದ್ದಾರೆ ಎಂದು ಈಶ್ವರಪ್ಪ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,’ ವೀರಶೈವ, ಲಿಂಗಾಯತ ಎಂದು 2 ಗುಂಪಾಗಿ ಒಡೆದಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಫೇಸ್ ವ್ಯಾಲ್ಯೂ ಕಳೆದುಕೊಂಡಿದ್ದಾರೆ. ಕುತಂತ್ರದ ರಾಜಕಾರಣಕ್ಕೆ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸುತ್ತಾರೆ. ಇದು ಕಾಂಗ್ರೆಸ್ ಸರ್ಕಾರದ ಅಂತ್ಯಕ್ಕೆ ಕಾರಣವಾಗುತ್ತದೆ. ಸಚಿವರಾದ ವಿನಯ್ ಕುಲಕರ್ಣಿ, ಮಲ್ಲಿಕಾರ್ಜುನ್ ಮಧ್ಯೆ ಭಿನ್ನಾಭಿಪ್ರಾಯವಿದೆ. ಸ್ವಾಮೀಜಿಗಳ ನಡುವೆಯೂ ಕೂಡ  ಭಿನ್ನಾಭಿಪ್ರಾಯ ಹುಟ್ಟು ಹಾಕಿದ್ದಾರೆ ಎಂದು ಈಶ್ವರಪ್ಪ ಅವರು ಹೇಳಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 


Share this Story:

Follow Webdunia kannada

ಮುಂದಿನ ಸುದ್ದಿ

ಯಡಿಯೂರಪ್ಪ, ಅನಂತಕುಮಾರ್, ಸದಾನಂದಗೌಡ ಅವರು ಹಾಲಲ್ಲಿ ಉಪ್ಪು ಹಾಕುವ ಕೆಲಸವನ್ನು ಮಾಡದೆ ನಮಗೆ ಸಹಾಯ ಮಾಡಬೇಕು-ಎಂ ಬಿ ಪಾಟೀಲ್