Select Your Language

Notifications

webdunia
webdunia
webdunia
webdunia

ಕೈ ನಾಯಕರ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ಧ ದೂರು ದಾಖಲು

ಕೈ ನಾಯಕರ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ಧ ದೂರು ದಾಖಲು
ಬೆಂಗಳೂರು , ಶುಕ್ರವಾರ, 16 ನವೆಂಬರ್ 2018 (09:24 IST)
ಬೆಂಗಳೂರು : ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಫೇಸ್ ಬುಕ್ ನಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬನ ವಿರುದ್ಧ ಕಾಂಗ್ರೆಸ್ ಪಕ್ಷದವರು ದೂರು ದಾಖಲಿಸಿದ್ದಾರೆ.


ಅರುಣ್ ಕುಮಾರ್ ಎಂಬಾತ ಕಾಂಗ್ರೆಸ್ ಪಕ್ಷ ಹಾಗೂ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ. ರಾಹುಲ್ ಗಾಂಧಿ ಗಾಂಜಾ ಸೇವಿಸುತ್ತಾರೆ ಎಂದೆಲ್ಲ ಬರೆದು ರಾಹುಲ್ ಚಿತ್ರ ಸಮೇತ ಮಾದಕವಸ್ತುಗಳ ಪೋಟೋ ಮತ್ತು ಸೋನಿಯಾ ಗಾಂಧಿ ಬಗ್ಗೆ ಅವಹೇಳನಕಾರಿ ಫೋಸ್ಟ್ ಮಾಡಿ ತೇಜೋವಧೆ ಮಾಡಿದ್ದ.


ಈ ಹಿನ್ನಲೆಯಲ್ಲಿ ಕೆಪಿಸಿಸಿ ಕಾನೂನು ಘಟಕದ ಕಾರ್ಯದರ್ಶಿ ಸೂರ್ಯ ಮುಕುಂದ್ ಎಂಬುವವರು ಅರುಣ್ ಕುಮಾರ್ ಎಂಬಾತನ ವಿರುದ್ಧ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ದೂರು ದಾಖಲಿಸಿಕೊಂಡ ಸೈಬರ್ ಕ್ರೈಂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕುಮಾರಸ್ವಾಮಿಯವರೇ ಇದೇನು ಕಿಚನ್ ಕ್ಯಾಬಿನೆಟಾ? ಬಿಜೆಪಿ ಲೇವಡಿ