Select Your Language

Notifications

webdunia
webdunia
webdunia
webdunia

ಆರತಿ ತಟ್ಟೆಗೆ ಹಣ ಹಾಕಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕಾಂಗ್ರೆಸ್ ಅಭ್ಯರ್ಥಿ ಆನಂದ ನ್ಯಾಮಗೌಡರು

ಆರತಿ ತಟ್ಟೆಗೆ ಹಣ ಹಾಕಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕಾಂಗ್ರೆಸ್ ಅಭ್ಯರ್ಥಿ ಆನಂದ ನ್ಯಾಮಗೌಡರು
ಬಾಗಲಕೋಟೆ , ಶನಿವಾರ, 3 ನವೆಂಬರ್ 2018 (14:42 IST)
ಬಾಗಲಕೋಟೆ : ಇಂದು ಜಮಖಂಡಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವನೆ ನಡೆಯುತ್ತಿದ್ದು, ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಆನಂದ ನ್ಯಾಮಗೌಡರು  ನೀತಿ ಸಂಹಿತಿ ಉಲ್ಲಂಘನೆ‌ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಇಂದು ಜಮಖಂಡಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವನೆ ನಡೆಯುತ್ತಿರುವ ಹಿನ್ನಲೆಯಲ್ಲಿ ನಾಗನೂರ ಗ್ರಾಮದ ಮತಗಟ್ಟೆ ಸಂಖ್ಯೆ 97 ಹಾಗೂ 98ರಲ್ಲಿ ಮತದಾರರಿಗೆ ಆರತಿ ಬೆಳಗಿ ಸ್ವಾಗತ ಕೊರಲು ಮಾದರಿ ಮತಗಟ್ಟೆಯಲ್ಲಿ ಚುನಾವಣಾ ಆಯೋಗದಿನದಿಂದ ಕಾರ್ಯಕರ್ತೆಯರನ್ನು ನೇಮಕಗೊಳಿಸಲಾಗಿತ್ತು.


ಕಾರ್ಯಕರ್ತೆ ಆಶಾ ಎಂಬುವವರು ಆರತಿ ಬೆಳಗುವ ವೇಳೆ ಅಲ್ಲಿ ಭೇಟಿ ನೀಡಿದ್ದ ಕಾಂಗ್ರೆಸ್ ಅಭ್ಯರ್ಥಿ ಆನಂದ ನ್ಯಾಮಗೌಡರು ಆರತಿ ತಟ್ಟೆಗೆ ಹಣ ಹಾಕಿ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಶಾಸಕ ಎಂ.ಪಿ. ರವೀಂದ್ರ ನಿಧನ