Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿ ದೇವಸ್ಥಾನದ ಭೇಟಿ; ರಾಜ್ಯದ ಕಾಂಗ್ರೆಸ್ ನಾಯಕರಲ್ಲಿ ಆತಂಕ!

ರಾಹುಲ್ ಗಾಂಧಿ ದೇವಸ್ಥಾನದ ಭೇಟಿ; ರಾಜ್ಯದ ಕಾಂಗ್ರೆಸ್ ನಾಯಕರಲ್ಲಿ ಆತಂಕ!
ಬೆಂಗಳೂರು , ಬುಧವಾರ, 31 ಜನವರಿ 2018 (12:22 IST)
ಬೆಂಗಳೂರು : ಗುಜರಾತ್ ಚುನಾವಣೆ ವೇಳೆ ಅಲ್ಲಿಯ ದೇವಸ್ಥಾನಗಳಿಗೆ ಭೇಟಿ ನೀಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯದಲ್ಲಿಯ ದೇವಸ್ಥಾನಗಳಿಗೆ ಭೇಟಿ ನೀಡಲು ಆಸಕ್ತಿ ತೋರಿಸದೇ ಇರುವುದು ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ಆತಂಕ ಮೂಡಿಸಿದೆ ಎಂಬ ಮಾಹಿತಿ ತಿಳಿದುಬಂದಿದೆ.


ರಾಜ್ಯ ನಾಯಕರು ರಾಹುಲ್ ಗಾಂಧಿ ಅವರು ಯಾವ ದೇವಸ್ಥಾನಗಳಿಗೆ ಭೇಟಿ ನೀಡಬೇಕೆಂಬುದರ ಬಗ್ಗೆ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ. ಆದ್ರೆ ರಾಹುಲ್ ಗಾಂಧಿ ಮಾತ್ರ ದೇವಸ್ಥಾನಗಳಿಗೆ  ಭೇಟಿ ನೀಡುವುದರ ಬಗ್ಗೆ ಇನ್ನು ಒಪ್ಪಿಗೆ ನೀಡಿಲ್ಲ ಎಂದು ಹೇಳಲಾಗುತ್ತಿದೆ. 12 ದಿನಗಳ ರಾಜ್ಯ ಪ್ರವಾಸಕ್ಕೆ ಮಾತ್ರ ರಾಹುಲ್ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಗುಜರಾತ್ ಚುನಾವಣೆ ವೇಳೆ ಅಲ್ಲಿಯ ದೇವಸ್ಥಾನಗಳಿಗೆ ಭೇಟಿ ನೀಡಿದ ಅವರು ಈಗ ಕರ್ನಾಟಕದಲ್ಲಿ ಮಾತ್ರ ಹಿಂದೂ ದೇಗುಲಗಳಿಗೆ ಭೇಟಿ ನೀಡಲು ಒಪ್ಪುತ್ತಿಲ್ಲ ಎಂಬ ಪ್ರಶ್ನೆ ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ಮನೆಮಾಡಿದೆ. ಫೆಬ್ರವರಿ 4ರಂದು ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂಬ ಮಾಹಿತಿ ಕೂಡ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮಗುವಿನ ಪಾಲಿಗೆ ಯಮನಾದ 'ಸೆರಲ್ಯಾಕ್'!