Webdunia - Bharat's app for daily news and videos

Install App

ಸಭಾಪತಿ ವಿವಾದ: ಸಿದ್ದರಾಮಯ್ಯ ಬಳಿ ದೂರಿಕೊಂಡ ಕಾಂಗ್ರೆಸ್ ಶಾಸಕರು

Webdunia
ಮಂಗಳವಾರ, 10 ಜುಲೈ 2018 (09:44 IST)
ಬೆಂಗಳೂರು: ವಿಧಾನಪರಿಷತ್ ನ ಸಭಾಪತಿ ಸ್ಥಾನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕರಲ್ಲಿ ಅಸಮಾಧಾನ ಎದ್ದಿದ್ದು, ಸಿದ್ದರಾಮಯ್ಯ ಬಳಿ ಶಾಸಕರು ಅತೃಪ್ತಿ ತೋಡಿಕೊಂಡಿದ್ದಾರೆ ಎನ್ನಲಾಗಿದೆ.

ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಗೆ ಬಹುಮತವಿದೆ. ಹೀಗಿದ್ದಾಗ ಜೆಡಿಎಸ್ ಗೆ ಸ್ಪೀಕರ್ ಸ್ಥಾನ ಬಿಟ್ಟುಕೊಡುವುದರ ಬಗ್ಗೆ ಕಾಂಗ್ರೆಸ್ ನಾಯಕರಲ್ಲಿ ಅಸಮಾಧಾನವಿದೆ. ಸ್ವತಃ ಡಿಸಿಎಂ ಪರಮೇಶ್ವರ್ ಜೆಡಿಎಸ್ ಗೆ ಸ್ಥಾನ ಬಿಟ್ಟುಕೊಡಲು ಮನಸ್ಸು ಮಾಡಿರುವುದು ಕಾಂಗ್ರೆಸ್ ಶಾಸಕರ ಅಸಮಾಧಾನ ಹೆಚ್ಚಿಸಿದೆ.

ಸ್ಪೀಕರ್ ಸ್ಥಾನ ಜೆಡಿಎಸ್ ಗೆ ಬಿಟ್ಟುಕೊಟ್ಟು, ಮುಖ್ಯ ಸಚೇತಕ ಸ್ಥಾನವನ್ನು ತಮ್ಮ ಆಪ್ತ ರಘು ಚೇತನ್ ಗೆ ವಹಿಸಲು ಪರಮೇಶ್ವರ್ ಮುಂದಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಇದೀಗ ಕಾಂಗ್ರೆಸ್ ನಾಯಕರು ಅಸಮಾಧಾನ ಹೊರ ಹಾಕಿದ್ದಾರೆ. ಇದೇ ಕಾರಣಕ್ಕೆ ಸ್ಪೀಕರ್ ಆಯ್ಕೆಯೂ ತಡವಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments