Select Your Language

Notifications

webdunia
webdunia
webdunia
webdunia

ವಾರಾಂತ್ಯದಲ್ಲಿ ಕರ್ಫ್ಯೂ : ಆತಂಕದಲ್ಲಿ ಕಾಫಿನಾಡು ಜನತೆ!

ವಾರಾಂತ್ಯದಲ್ಲಿ ಕರ್ಫ್ಯೂ : ಆತಂಕದಲ್ಲಿ ಕಾಫಿನಾಡು ಜನತೆ!
ಚಿಕ್ಕಮಗಳೂರು , ಭಾನುವಾರ, 16 ಜನವರಿ 2022 (13:41 IST)
ಚಿಕ್ಕಮಗಳೂರು : ರಾಜ್ಯಕ್ಕೆ ಹೋಲಿಸಿದರೆ ಕಾಫಿನಾಡು ಚಿಕ್ಕಮಗಳೂರಲ್ಲಿ ಕೊರೊನಾ ಕೇಸ್ ತುಸು ಕಡಿಮೆಯೇ ಇದೆ.

ಆದರೆ ಆ ಸಂಖ್ಯೆ ಕ್ರಮೇಣ ನಿರೀಕ್ಷೆಗೂ ಮೀರಿ ಹೆಚ್ಚಾಗುತ್ತಿರೋದು ಜಿಲ್ಲೆಯ ಜನರನ್ನು ಕಂಗಾಲಾಗಿಸಿದೆ. ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಪ್ರಮುಖ ಆಕರ್ಷಣೆಯ ಕೇಂದ್ರ ಬಿಂದುವಾಗಿರೋ ಮುಳ್ಳಯ್ಯನಗಿರಿಗೆ ವಾರಪೂರ್ತಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ.

ನಿತ್ಯ 1,000ಕ್ಕೂ ಅಧಿಕ ಪ್ರವಾಸಿಗರು ಮುಳ್ಳಯ್ಯಗಿರಿಗೆ ಭೇಟಿ ನೀಡುತ್ತಿದ್ದಾರೆ. ಆದರೆ ಸರ್ಕಾರ ವೀಕೆಂಡ್ ಕರ್ಫ್ಯೂ ವಿಧಿಸಿರುವ ಹಿನ್ನೆಲೆ ಪ್ರವಾಸಿಗರ ಸಂಖ್ಯೆ ಸಂಪೂರ್ಣ ಇಳಿಮುಖವಾಗಿದೆ.

ವಾರಪೂರ್ತಿ ಬರುವ ಪ್ರವಾಸಿಗರಿಂದಲೇ ಜಿಲ್ಲೆಯಲ್ಲಿ ಸೋಂಕು ಹೆಚ್ಚಾಗುತ್ತಿದೆ ಎಂದು ಜಿಲ್ಲೆಯ ಜನ ಆತಂಕಕ್ಕೀಡಾಗಿದ್ದಾರೆ.  ಜಿಲ್ಲೆಯಲ್ಲಿ ನಿತ್ಯ 5-10 ಇದ್ದ ಕೇಸ್ ಗಳು ಮೂರನೇ ಅಲೆ ಆರಂಭದಲ್ಲಿ 20-25ಕ್ಕೆ ಬಂದು ನಿಂತಿತ್ತು.

ಬಳಿಕ 40-50ರ ಗಡಿಯಲ್ಲಿದ್ದ ಕೊರೊನಾ ಸೋಂಕಿತರ ಸಂಖ್ಯೆ, ಶನಿವಾರ-ಭಾನುವಾರ ಎರಡೇ ದಿನಕ್ಕೆ ಕ್ರಮವಾಗಿ 174-196ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ನಿತ್ಯ ನೂರರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರೋ ಸೋಂಕನ್ನು ಕಂಡು ಜಿಲ್ಲೆಯ ಜನ ಆತಂಕಕ್ಕೀಡಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಥಿಯೇಟರ್‌ಗಳು ಬಂದ್ !