Select Your Language

Notifications

webdunia
webdunia
webdunia
webdunia

ಸಿಎಲ್ ಪಿ ಸಭೆಗೆ ಕಾಂಗ್ರೆಸ್ ನ ಅತೃಪ್ತ ಶಾಸಕರು ಬರ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಡಿಸಿಎಂ

ಸಿಎಲ್ ಪಿ ಸಭೆಗೆ ಕಾಂಗ್ರೆಸ್ ನ ಅತೃಪ್ತ ಶಾಸಕರು ಬರ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಡಿಸಿಎಂ
ಬೆಂಗಳೂರು , ಶುಕ್ರವಾರ, 18 ಜನವರಿ 2019 (14:24 IST)
ಬೆಂಗಳೂರು : ಸಿದ್ದರಾಮಯ್ಯ ಅವರು ಇಂದು ಕರೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಅತೃಪ್ತ ಶಾಸಕರು ಎಲ್ಲರೂ ಸಭೆಗೆ ಬರ್ತಾರೆ ಎನ್ನುವ ವಿಶ್ವಾಸವಿದೆ ಎಂದು ಡಿಸಿಎಂ ಪರಮೇಶ್ವರ್ ಹೇಳಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನ ಸಭೆಯಲ್ಲಿ ಲೋಕಸಭೆ ಚುನಾವಣೆಯ ತಯಾರಿಯ ಬಗ್ಗೆ ಹಾಗೂ  ಶಾಸಕರ ಕ್ಷೇತ್ರಗಳಲ್ಲಿ ತಯಾರಿ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಹೇಳಿದ್ದಾರೆ.


ಇದೇ ವೇಳೆ ಸಿಎಲ್ ಪಿ ಸಭೆಗೆ ಕಾಂಗ್ರೆಸ್ ಶಾಸಕರು ಬರ್ತಾರಾ ನೋಡಿಕೊಳ್ಳಲಿ ಎಂಬ ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಅವರು,’ ಪಾಪ ಯಡಿಯೂರಪ್ಪನವರನ್ನು ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಅಲ್ಲ. ಅವರ ಪಕ್ಷದ ಶಾಸಕರನ್ನು ಅವರು ನೋಡಿಕೊಳ್ಳಲಿ, ಅವರನ್ನು ಕರೆದುಕೊಂಡು ಹೋಗಿ ಎಲ್ಲೋ ಇಟ್ಟಿದ್ದಾರೆ. ನಮ್ಮ ಪಕ್ಷದ ಶಾಸಕರ ಚಿಂತೆ ಅವರಿಗೆ ಬೇಡ. ನಮ್ಮ ಶಾಸಕರನ್ನು ಸೆಳೆಯುವ ಕೆಲಸ ಮಾಡುತ್ತಿದ್ದು, ಅದರಲ್ಲಿ ಯಶಸ್ವಿಯಾಗಲ್ಲ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದಗಂಗಾ ಶ್ರೀಗಳು ಬೇಗ ಗುಣಮುಖರಾಗಲಿ- ಕನ್ನಡದಲ್ಲಿ ಪ್ರಧಾನಿ ಮೋದಿ ಟ್ವೀಟ್